ಜುಲೈ 10 ಮತ್ತು 11 ರಂದು ಆಳ್ವಾಸ್‍ನಲ್ಲಿ ಕನ್ನಡ ಗಾನ ಗುಚ್ಛ’ ವೈವಿಧ್ಯಮಯ ಹಾಡುಗಳ ವಿನೂತನ ರಂಗಪ್ರಸ್ತುತಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.)ಮೂಡುಬಿದಿರೆ ಆಶ್ರಯದಲ್ಲಿ ಜುಲೈ 10 ಮತ್ತು 11 ರಂದು ಸಂಜೆ 6.30ಕ್ಕೆ ವಿದ್ಯಾಗಿರಿಯ ನುಡಿಸಿರಿ ವೇದಿಕೆಯಲ್ಲಿ ಕನ್ನಡ ಗಾನ ಗುಚ್ಛ’ ಎಂಬ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಆಳ್ವಾಸ್ ರಂಗ ಅಧ್ಯಯನ ಕೇಂದ್ರ ಪ್ರಸ್ತುತ ಪಡಿಸುವ ಈ ಗಾನ ಗುಚ್ಛವನ್ನು ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಸಂಯೋಜಿಸಿದ್ದಾರೆ. ಕನ್ನಡದ ವಿವಿಧ ಪ್ರಾಕಾರಗಳ ವೈವಿಧ್ಯಮಯ ಹಾಡುಗಳನ್ನು ರಂಗಸಾಧ್ಯತೆಗಳ ಮೂಲಕ ಪ್ರಸ್ತುತಪಡಿಸುವ ಎರಡು ಗಂಟೆಗಳ ವಿಶೇಷ ಕಾರ್ಯಕ್ರಮ ಇದಾಗಿದ್ದು ತಂಡದಲ್ಲಿ ಡಾ| ಜೀವನ್ ರಾಂ ಸುಳ್ಯ, ಮಮತಾ ಕಲ್ಮಕಾರು, ಮನುಜ ನೇಹಿಗ ಸುಳ್ಯ, ಸಮನ್ವಿತ ಹುಬ್ಬಳ್ಳಿ, ಸತ್ಯಜಿತ್ ರಾವ್, ಸತೀಶ್ ಸುರತ್ಕಲ್, ಸಂತೋಷ್ ಉಡುಪಿ, ತೇಜಸ್ವಿನಿ ತರೀಕೆರೆ, ನಿಶ್ಮಿತಾ ಬೆಂಗಳೂರು, ವಿಸ್ಮಯ ಪೈ, ಸಿಂಚನಾ ಶೆಟ್ಟಿ ಹಾಗೂ ಕೃಪಾ ನಾಯಕ್ ಉಂತಾದವರು ಭಾಗವಹಿಸಲಿದ್ದಾರೆ.

ಸಭಾ ಕಾರ್ಯಕ್ರಮ ಇರುವುದಿಲ್ಲ ಮತ್ತು ಕಾರ್ಯಕ್ರಮ ಸಮಯಕ್ಕೆ ಸರಿಯಾಗಿ ಆರಂಭವಾಗಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ ಮೋಹನ ಆಳ್ವ ತಿಳಿಸಿದ್ದಾರೆ.

Leave a Reply

Your email address will not be published. Required fields are marked *