
ಕಾರ್ಕಳ: ಮಡಿಕೇರಿಯಲ್ಲಿ ನಡೆದ ಕೊಡಗು ಹಾಫ್ ಮ್ಯಾರಥಾನ್ 2026 ರಲ್ಲಿ ನಿಟ್ಟೆ ಅಥ್ಲೀಟ್ ಗಳಾದ ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ ಜಿ ಅವರು Rs. 20,000 ನಗದು ಬಹುಮಾನದೊಂದಿಗೆ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿರುವರು ಮತ್ತು ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ಅವರು Rs.15,000 ನಗದು ಬಹುಮಾನದೊಂದಿಗೆ ಕಂಚಿನ ಪದಕ ಗಳಿಸಿರುತ್ತಾರೆ.
