ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ವತಿಯಿಂದ ನಡೆದ ಸೇವಾ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ

ಕಾರ್ಕಳ: ಭಾರತೀಯ ಜನತಾ ಪಾರ್ಟಿ ಕಾರ್ಕಳ ಮಂಡಲ ವತಿಯಿಂದ ನಡೆದ ಸೇವಾ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ ಸೆ. 15 ರಂದು ವಿಕಾಸದಲ್ಲಿ ಮಂಡಲ ಅಧ್ಯಕ್ಷರಾದ ನವೀನ್ ನಾಯಕ್ ನಿಟ್ಟೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರ ವರೆಗೆ ಒಂದು ತಿಂಗಳ ಕಾಲ ‘ಸೇವಾ ಸಂಕಲ್ಪ ಅಭಿಯಾನ’ ನಡೆಯಲಿದ್ದು, ಈ ಅವಧಿಯಲ್ಲಿ 13 ವಿಭಿನ್ನ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಭಿಯಾನದ ಆರಂಭದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ ದೀಪ’ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಾಗಿದೆ.
ಪ್ರತಿ ಫಲಾನುಭವಿಯ ಮನೆಯಲ್ಲಿ ದೇವರ ಮುಂದೆ ದೀಪ ಬೆಳಗಿಸಿ, “ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರಿಗೆ ಇನ್ನಷ್ಟು ಆಯುಷ್ಯ, ಆರೋಗ್ಯ, ಶಕ್ತಿ ಹಾಗೂ ಜನಸೇವೆ ಮಾಡುವ ಭಾಗ್ಯವನ್ನು ದೇವರು ಕರುಣಿಸಲಿ. ದೇಶದ ಅಭಿವೃದ್ಧಿಗೆ ಇನ್ನಷ್ಟು ಶಕ್ತಿ ನೀಡಲಿ”ಎಂದು ಪ್ರಾರ್ಥಿಸಿ, ಜನರ ಆಶೀರ್ವಾದ ಪಡೆಯುವ ಸಂಕಲ್ಪ ಮಾಡಲು ಕಾರ್ಯಕರ್ತರಿಗೆ ತಿಳಿಸಲಾಯಿತು.

2001 ರಿಂದ ಆರಂಭವಾದ ನಿಸ್ವಾರ್ಥ ಜನಸೇವೆಯ ಪಯಣಕ್ಕೆ 25 ವರ್ಷಗಳ ಸಂಭ್ರಮ.
ಗುಜರಾತ್ ಮುಖ್ಯಮಂತ್ರಿಯಿಂದ ಹಿಡಿದು ದೇಶದ ಪ್ರಧಾನಿಯವರೆಗೆ, ‘ಜನಸೇವೆಯಿಂದ ರಾಷ್ಟ್ರಸೇವೆ’ಯೇ ಪರಮ ಗುರಿ ಎಂಬ ಧ್ಯೇಯದೊಂದಿಗೆ ಸಾಗುತ್ತಿರುವ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಸಮರ್ಪಣಾ ಭಾವವನ್ನು ಗೌರವಿಸಬೇಕು.
ಸೆಪ್ಟೆಂಬರ್ 17 ರಿಂದ ಆರಂಭವಾಗುವ ‘ಸೇವಾ ಸಂಕಲ್ಪ ಅಭಿಯಾನ’ ದಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ಭಾಗವಹಿಸಿ ಅಭಿಯಾನವನ್ನು ಯಶಸ್ವೀಗೊಳಿಸುವಂತೆ ಕೋರಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ ಸಭೆಗೆ ಮಾಹಿತಿ ನೀಡಿದರು. ಹಿರಿಯರಾದ ಜಯರಾಮ್ ಸಾಲ್ಯಾನ್ ಸೂರ್ಯಕಾಂತ್ ಶೆಟ್ಟಿ ಅಂಥೋನಿ ಡಿಸೋಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಶೆಟ್ಟಿ, ಸತೀಶ್ ಪೂಜಾರಿ ಉಪಸ್ಥಿತರಿದ್ದರು. ಮಂಡಲ ಕಾರ್ಯದರ್ಶಿ ಕರುಣಾಕರ್ ಕೋಟ್ಯಾನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *