ಉಡುಪಿ: ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಕೂಡ ಸಾಧಿಸಲು ಸಮರ್ಥರಿದ್ದಾರೆ – ಎಂ ಎ ಗಫೂರ್

ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಬೌದ್ಧಿಕವಾಗಿಯೂ ಮಾನಸಿಕವಾಗಿಯೂ ಸಮರ್ಥರಿದ್ದಾರೆ. ಅವರಿಗೆ ಅನುಕೂಲತೆಗಳನ್ನು ಮತ್ತು ಅವಕಾಶಗಳನ್ನು ಒದಗಿಸಿಕೊಟ್ಟಲ್ಲಿ ಅವರು ಉನ್ನತವಾದ ಸಾಧನೆಯನ್ನು ಮಾಡಬಲ್ಲರು. ಈ ದಿಸೆಯಲ್ಲಿ ಸಂಘ ಸಂಸ್ಥೆಗಳೂ ಕೂಡ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಡುಗೆಗಳನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಂ ಎ ಗಫೂರ್ ಅಭಿಪ್ರಾಯಪಟ್ಟರು.  ಅವರು ಉಡುಪಿ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಮಣಿಪಾಲ್ ಪೇಮೆಂಟ್ ಅಂಡ್ ಐಡೆಂಟಿಟಿ ಸೊಲ್ಯೂಷನ್ಸ್ ಲಿಮಿಟೆಡ್ ರವರಿಂದ ಸುನಿಧಿ ಫೌಂಡೇಶನ್ ಟ್ರಸ್ಟ್ ಮೂಲಕ ಕೊಡ ಮಾಡಲಾದ ಸುಮಾರು 2 ಲಕ್ಷ ರುಪಾಯಿ ಮೌಲ್ಯದ ವಿಜ್ಞಾನ ಪ್ರಯೋಗೋಪಕರಣಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ಕನ್ನಡ ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ಪೂರ್ಣಿಮಾ, ಸುನಿಧಿ ಫೌಂಡೇಶನ್ ನ ರೂಪಶ್ರೀ ರತ್ನಾಕರ್, ಪ್ರಾಂಶುಪಾಲ ಜಗದೀಶ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ ಎಲ್ಲಮ್ಮ, ಡಯಟ್ ಉಪನ್ಯಾಸಕ ಯೋಗ ನರಸಿಂಹಸ್ವಾಮಿ, ಮುಖ್ಯೋಪಾಧ್ಯಾಯನಿ ಇಂದಿರಾ ಬಿ ಮತ್ತು ಸಂಸ್ಥೆಯ ಶಿಕ್ಷಕರು ಉಪಸ್ಥಿತರಿದ್ದರು.

ಶಾಸಕ ಐವನ್‌ ಡಿʼಸೋಜಾರವರ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಿಂದ ಉಡುಪಿ ಜಿಲ್ಲೆ ಉಡುಪಿ ತಾಲೂಕು ಅಗರದಂಡೆ ರಸ್ತೆ ಉದ್ಘಾಟನೆ

ಉಡುಪಿ ಜಿಲ್ಲೆ ಉಡುಪಿ ತಾಲೂಕು ಕುತ್ಯಾರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಗರ್‌ದಂಡೆ ಕೇಂಜಹಿತ್ಲು ರಸ್ತೆಗೆ ವಿಧಾನ ಪರಿಷತ್‌ ಶಾಸಕರಾದ ಐವನ್‌ ಡಿʼಸೋಜಾರವರ ಶಾಸಕರ ನಿಧಿಯಿಂದ 10.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿ, ನಿರ್ಮಾಣಗೊಂಡ ರಸ್ತೆಯ ಉದ್ಘಾಟನೆಯನ್ನು […]

ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ದ. ಕ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ

ಬಂಟ್ವಾಳ: ಬಿ.ಸಿ.ರೋಡಿನ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು  ನಡೆಯುವ 28 ನೇ ಯ ದ. ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ  ಸಾಹಿತಿ, ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. […]