ಮಂಗಳೂರು: ಈ ವಿಶ್ವ ದಾಖಲೆ ಖಂಡಿತಾ ಆಗಲಿದೆ‌ – ಲಾಂಛನ ಬಿಡುಗಡೆ ಮಾಡಿದ ಆರೋಗ್ಯ ಮಂತ್ರಿ ದಿನೇಶ್‌ ಗುಂಡೂರಾವ್

ಮಂಗಳೂರು:ʼʼಕೊಂಕಣಿಗರ ಜನಸಂಖ್ಯೆ ಕಡಿಮೆಯಿದ್ದರೂ, ಅವರ ಉತ್ಸಾಹ ಮತ್ತು ಸೃಜನಶೀಲತೆ ಶ್ಲಾಘನೀಯ. ಸಾಂಸ್ಕೃತಿಕ ನೆಲೆಗಟ್ಟಿನಲ್ಲಿ ಮತ್ತು ಸಮಾಜಸೇವೆಯಲ್ಲಿ ಕೊಂಕಣಿ ಸಮುದಾಯ ಮುಂಚೂಣಿಯಲ್ಲಿದೆ. ಸಂಗೀತ ಅವರಿಗೆ ರಕ್ತಗತವಾಗಿದೆ. ಹಲವು ದಾಖಲೆಗಳನ್ನು ಬರೆದ ಮಾಂಡ್‌ ಸೊಭಣ್‌ ಸಂಸ್ಥೆ ಈಗ ಆರು ಸಾವಿರ ಗಾಯಕರು ಮತ್ತು ಐದು ಸಾವಿರ ಹಾಡುಗಳಿಂದ ಹೊಸ ವಿಶ್ವ ದಾಖಲೆಯನ್ನು ರಚಿಸಲು ಸಜ್ಜಾಗಿದೆ. ಖಂಡಿತಾ ಈ ದಾಖಲೆ ಆಗಲಿದೆ ಎಂಬ ವಿಶ್ವಾಸವಿದೆ. ಸಾಧ್ಯವಾದಲ್ಲಿ ನಾನೂ ಕಾರ್ಯಕ್ರಮಕ್ಕೆ ಬರುವೆʼʼ ಎಂದು ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು. ಅವರು ಕೊಂಕಣಿಯ ಪ್ರಮುಖ ಸಾಂಸೃತಿಕ ಸಂಘಟನೆ ಮಾಂಡ್‌ ಸೊಭಾಣ್ ತನ್ನ ಅಸ್ತಿತ್ವದ ಮಾಣಿಕ್ಯ ಮಹೋತ್ಸವ ಆಚರಣಾ ಸಂದರ್ಭದಲ್ಲಿ, ಇದೇ ನವೆಂಬರ್‌03 ರಿಂದ 15 ರವರೆಗೆ ಆಯೋಜಿಸಿರುವ ಪ್ರಥಮ ವಿಶ್ವ ಕೊಂಕಣಿ ಸಂಗೀತ ಮಹಾ ಸಮಾವೇಶದ ಮುಹೂರ್ತವನ್ನು ವೀಣೆಯಪ್ರತಿಕೃತಿ ಮೇಲಿರುವ 12 ವಿಭಿನ್ನ ರಂಗಿನ ದೀಪಗಳನ್ನು ಬೆಳಗಿಸಿ ಮತ್ತು ಹೂವಿನ ಮೊಗ್ಗಿನಿಂದ ಸಮಾವೇಶದ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಗೌರವ ಅತಿಥಿ ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಸಂಗೀತ ನಿರ್ದೇಶಕ ಜೊಯೆಲ್‌ ಪಿರೇರಾ ಇವರಿಗೆ ಸಂಗೀತ ಬೇಟನ್‌ ಹಸ್ತಾಂತರಿಸಿ ಮಾತನಾಡಿದರು.ʻಮಹಾನ್‌ ಸಾಧನೆಗಳನ್ನು ಮಾಡಿದ ಮಾಂಡ್‌ ಸೊಭಾಣ್ ಸಂಸ್ಥೆಗೆ‌ ಇದುವರೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲಿಲ್ಲ. ಈ ಬಗ್ಗೆ ಸರಕಾರದ ಗಮನ ಸೆಳೆಯಲಾಗುವುದು. ಕೊಂಕಣಿಯ ಕೀರ್ತಿ ಬಾವುಟವನ್ನು ಸದಾಕಾಲ ಹಾರಿಸುವ ಸಂಸ್ಥೆಯ ಈ ಕಾರ್ಯಕ್ರಮಕ್ಕೆ ಸರಕಾರ ಅನುದಾನ ನೀಡಬೇಕು. ಈ ದಾಖಲೆಯೂ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿದರು. ಗೌರವ ಅತಿಥಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಮತ್ತು ಗೋವಾದ ಕಲಾವಿದ ಮೈಕಲ್‌ ಗ್ರೇಶಿಯಸ್‌ ಶುಭ ಹಾರೈಸಿದರು. ಪ್ರಸ್ತಾವಿಕ ನುಡಿಗಳನ್ನಾಡಿದ ಅಧ್ಯಕ್ಷ ಲುವಿ ಪಿಂಟೊ, ಕೊಂಕಣಿ ಸಂಗೀತಕ್ಕೆ ಮಹೋನ್ನತ ಹಿರಿಮೆ ತಂದು ಕೊಟ್ಟ ಎರಿಕ್‌ ಒಝೇರಿಯೊರವರ ಕೆಲಸಗಳನ್ನು ಮುಂದುವರಿಸುವುದೇ ನಾವು ಅವರಿಗೆ ಸಲ್ಲಿಸುವ ನೈಜ ಶ್ರದ್ಧಾಂಜಲಿ. ಇದು ಕೇವಲ ಗಿನ್ನೆಸ್ ದಾಖಲೆಯ ಪ್ರಯತ್ನವಾಗದೆ, ಕೊಂಕಣಿ ಒಗ್ಗಟ್ಟನ್ನು ಆಚರಿಸುವ, ಕೊಂಕಣಿ ಬಾವುಟವನ್ನು ಜಗದೆತ್ತರಕ್ಕೆ ಏರಿಸುವ ಹಾಗೂ ಈ ಮೂಲಕ ಕೊಂಕಣಿ ಸಂಗೀತದ ಶ್ರೀಮಂತ ಪರಂಪರೆಯನ್ನು ಸಂಭ್ರಮಿಸುವ ಅವಕಾಶವಾಗಲಿದೆ. ಇದುವರೆಗೆ ನಮ್ಮ ಕಾರ್ಯಕ್ರಮದ ಶಿಸ್ತು, ಅಚ್ಚುಕಟ್ಟುತನ ನೋಡಿ ಜನರೇ ಸಹಕರಿಸಿದ್ದಾರೆ. ಈ ಕಾರ್ಯಕ್ರಮ ಕೂಡಾ ಎಲ್ಲರ ಸಹಕಾರದಿಂದ ಯಶಸ್ವಿಯಾಗಲಿದೆ. ಎಂದು ಹೇಳಿದರು. ಗಾಯಕಿ ಜೊಯ್ಸ್‌ ಒಝೇರಿಯೊರನ್ನು ಗೌರವಿಸಲಾಯಿತು. ವೇದಿಕೆಯಲ್ಲಿ ಮೆಸ್ಕಾಂ ಅಧ್ಯಕ್ಷ ಹರೀಶ್‌ ಕುಮಾರ್, ಸಂಘಟಕ ಸ್ಟ್ಯಾನಿ ಆಲ್ವಾರಿಸ್ ಮತ್ತು ಕಾರ್ಯದರ್ಶಿ ರೊನಾಲ್ಡ್‌ ಕ್ರಾಸ್ತಾ ಉಪಸ್ಥಿತರಿದ್ದರು. ರೈನಾ ಸಿಕ್ವೇರಾ ನೇತೃತ್ವದಲ್ಲಿ ಸುಮೇಳ್‌ ತಂಡದಿಂದ ಗಾಯನ ನಡೆಯಿತು. ಮಾಂಡ್‌ ಸೊಭಾಣ್ ನಡೆದು ಬಂದ ಹಾದಿಯ ಬಗ್ಗೆ ಸಾಕ್ಷ್ಯ ಚಿತ್ರ ಪ್ರದರ್ಶಿಸಲಾಯಿತು. ಕಲಾಂಗಣ ಪಿರ್ಜೆಂತ್‌ ರೊಯ್‌ ಕ್ಯಾಸ್ತೆಲಿನೊ ಧನ್ಯವಾದ ಸಲ್ಲಿಸಿದರು. ಐರಿನ್‌ ರೆಬೆಲ್ಲೊ ಕಾರ್ಯಕ್ರಮ ನಿರೂಪಿಸಿದರು. 

ಕಾರ್ಕಳ: ಏ. 19 ರಂದು ಬಾಹುಬಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಕಾರ್ಯಾಲಯ ಉದ್ಘಾಟನೆ ಹಾಗೂ ದಿನಾಂಕ ಘೋಷಣೆ

ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ (ರಿ.) ವತಿಯಿಂದ ಕಾರ್ಯಾಲಯ ಉದ್ಘಾಟನೆ ಮತ್ತು 2027ರಲ್ಲಿ ನಡೆಯಲಿರುವ ಕಾರ್ಕಳ ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪೂರ್ವಭಾವಿಯಾಗಿ ಏ. 19ರಂದು ಮಸ್ತಕಾಭಿಷೇಕ ಕಾರ್ಯಾಲಯ […]

ಅಜೆಕಾರು ಮಹಾಗಣಪತಿ ದೇವರ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು

ಕಾರ್ಕಳ: ಅಜೆಕಾರು ಪದ್ಮ ನಗರ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಪ್ರಯುಕ್ತ ಏಪ್ರಿಲ್ 11 ರಂದು ಶನಿವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಂಜೆ ಪುತ್ತೂರು ಜಗದೀಶ್ ಬಳಗದಿಂದ ಭಕ್ತಿ ಗಾನ ವೈಭವ ಕಾರ್ಯಕ್ರಮ […]

ಅಜೆಕಾರು ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹೊರೆಕಾಣಿಕೆಯ ಮೆರವಣಿಗೆ

ಕಾರ್ಕಳ: ಅಜೆಕಾರು ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಪೂರ್ವಭಾವಿಯಾಗಿ ನಡೆದ ಹೊರೆಕಾಣಿಕೆ ಮೆರವಣಿಗೆ ಹಾಗೂ ಗಣಪತಿ ದೇವರ ಮೆರವಣಿಗೆ ಭಕ್ತಿಭಾವದಿಂದ ಯಶಸ್ವಿಯಾಗಿ ನೆರವೇರಿತು. ಈ ಮೆರವಣಿಗೆಗೆ ಊರಿನ ಜನರಿಂದ ಭಾರೀ ಸ್ಪಂದನೆ ವ್ಯಕ್ತವಾಗಿದ್ದು, ಧಾರ್ಮಿಕ […]

ಅತ್ಯುತ್ತಮ ಸಾಧನೆಯಲ್ಲಿ ಮೂಡುಬಿದಿರೆ ನ್ಯೂ ವೈಬ್ರೆಂಟ್

ವರದಿ ರಾಯಿ ರಾಜಕುಮಾರಮೂಡುಬಿದಿರೆ: ವೈಬ್ರೆಂಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್‌ ನಡಿ ಕಾರ್ಯನಿರ್ವಹಿಸುತ್ತಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜು 25-26 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ವಿಜ್ಞಾನ […]

ಕಾರ್ಕಳ ಪುರಸಭಾ ಮಾಹಿತಿ ಹಕ್ಕು ಅಧಿಕಾರಿ ವಿರುದ್ಧ ಮಾಜಿ ಸದಸ್ಯನಿಂದ ಪ್ರತಿಭಟನೆ

ಕಾರ್ಕಳ: ಕಾರ್ಕಳ ಪುರಸಭೆಯಲ್ಲಿ ಮಾಹಿತಿ ಹಕ್ಕು ಅಧಿಕಾರಿ ತಾನು ಕೇಳಿದ ದಾಖಲೆಗಳನ್ನು ನೀಡದೆ ಸತಾಯಿಸುತ್ತಿದ್ದಾರೆ ಮಾಹಿತಿ ಕೇಳಿದರೆ ಪೂರ್ಣ ಮಾಹಿತಿ ನೀಡದೆ ತಾವೇ ಮೇಲ್ಮಮನವಿ ಸಲ್ಲಿಸಿ ಉಡಾಪೆ ಉತ್ತರ ನೀಡುತ್ತಾರೆ ಎಂದು ಆರೋಪಿಸಿ ಮಾಹಿತಿ […]

ದ್ವಿತೀಯ ಪಿಯುಸಿ ಫಲಿತಾಂಶ ರಾಜ್ಯಕ್ಕೆ ಪ್ರಥಮ ದ್ವಿತೀಯ ಸ್ಥಾನಿಯಾದ ಉಡುಪಿ ದಕ್ಷಿಣಕನ್ನಡ ಜಿಲ್ಲೆ: ಉದಯ ಶೆಟ್ಟಿ ಮುನಿಯಾಲು ಅವರಿಂದ ಅಭಿನಂದನೆ

ಉಡುಪಿ: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನ ಗಳಿಸಿರುವುದು ಅತ್ಯಂತ ಹೆಮ್ಮೆಯ ವಿಷಯವಾಗಿದೆ, ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯು ದ್ವಿತೀಯ ಸ್ಥಾನಿಯಾಗಿದೆ. ಈ ಸಾಧನೆಗೆ ಉಭಯ ಜಿಲ್ಲೆಯ […]

ದ್ವಿತೀಯ ಪಿಯುಸಿ ಫಲಿತಾಂಶ: ಸಾಧನೆಯ ಶಿಖರಕ್ಕೇರಿದ ಕೆ.ಎಂ.ಇ.ಎಸ್ ಪಿಯು ಕಾಲೇಜು ವಿದ್ಯಾರ್ಥಿಗಳು

ಕಾರ್ಕಳ: ಕೆ.ಎಂ.ಇ.ಎಸ್ (KMES) ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ನಡೆದ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಸಂಸ್ಥೆಯು […]

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಆಳ್ವಾಸ್ ಐತಿಹಾಸಿಕ ಸಾಧನೆ

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2026ರಲ್ಲಿ ಅಸಾಧಾರಣ ಸಾಧನೆಗೈದು ತನ್ನ ಶೈಕ್ಷಣಿಕ ಮೇಲುಗೈಯನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ದಿಶಾ 600ರಲ್ಲಿ 600 ಅಂಕಗಳನ್ನು ಪಡೆದು ರಾಜ್ಯಕ್ಕೆ […]

ಶಕ್ತಿ ಪದವಿ ಪೂರ್ವಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಮೌಲ್ಯಕರುಣಾಕರ ಶೆಟ್ಟಿ 588 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ ಹಾಗೂ ವಾಣಿಜ್ಯ ವಿಭಾಗದಲ್ಲಿ ಶ್ರೀವಿಷ್ಣು 589 ಅಂಕಗಳೊಂದಿಗೆ ಕಾಲೇಜಿಗೆ ಪ್ರಥಮ

ಮಂಗಳೂರು: ಶಕ್ತಿನಗರದ ಶಕ್ತಿ ಪ.ಪೂ ಕಾಲೇಜಿನ ದ್ವಿತೀಯ ಪ.ಪೂ ಪರೀಕ್ಷೆಯಲ್ಲಿ ವಿಜ್ಞಾನ ವಿಭಾಗದ ಪಿಸಿಎಂಬಿ ಮತ್ತು ಪಿಸಿಎಂಸಿ ವಿಭಾಗದಲ್ಲಿ ಒಟ್ಟು 65 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಇವರಲ್ಲಿ 37 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ. […]