ಮಂಗಳೂರು: ಮೂರನೆಯ ವಿದ್ಯಾರ್ಥಿ ತುಳು ಸಮ್ಮೇಳನದ ಲಾಂಛನ ಬಿಡುಗಡೆ

ಮಂಗಳೂರು: ಮಾರ್ಚ್ 20 ರಂದು ತುಳು ಪರಿಷತ್ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಜಂಟಿಯಾಗಿ ಆಯೋಜಿಸಲಿರುವ ಮೂರನೆಯ ವಿದ್ಯಾರ್ಥಿ ತುಳು  ಸಮ್ಮೇಳನದ  ಲಾಂಛನವನ್ನು  ಶ್ರೀದೇವಿ ಸಮೂಹ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಎ. ಸದಾನಂದ ಶೆಟ್ಟಿಯವರು ಬಿಡುಗಡೆ ಮಾಡಿದರು.

ಈ ಲಾಂಛನವನ್ನು ಐ.ಎಮ್. ಜೆ. ಇನ್ಸ್ ಟಿಟ್ಯೂಟ್ ಆಫ್  ಸಯನ್ಸ್ ಅಂಡ್ ಕಾಮಸ್೯ ಮೂಡ್ಲಕಟ್ಟೆ ಕಯಂದಾಪುರದ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿ ಶ್ರೇಯಸ್ ಶೆಟ್ಟಿಯವರು ರಚಿಸಿದ್ದಾರೆ. ಲಾಂಛನ ಬಿಡುಗಡೆಯ ಸಂದರ್ಭದಲ್ಲಿ  ಹರಿಕಿಶನ್ ಶೆಟ್ಟಿ, ತುಳು ಪರಿಷತ್ ನ ಅಧ್ಯಕ್ಷರಾದ ಶುಭೋದಯ ಆಳ್ವ, ಪ್ರಧಾನ ಕಾರ್ಯದರ್ಶಿಗಳಾದ ಬೆನೆಟ್ ಅಮ್ಮನ್ನ, ಕಾರ್ಯದರ್ಶಿ ಅಮಿತಾ ಅಶ್ವಿನ್, ಕೋಶಾಧಿಕಾರಿ ಸುಮತಿ ಹೆಗ್ಡೆ, ಸ್ಪರ್ಧಾ ಸಂಚಾಲಕರಾದ ದುರ್ಗಾಪ್ರಸಾದ್ ಮತ್ತು ಚಂದ್ರಕಲಾ ರಾವ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *