ಉಜಿರೆ: ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಸಂತಸದಾಯಕ ಕಲಿಕೆ ಸಾಧ್ಯವಾಗುತ್ತದೆ – ಹೇಮಾವತಿ ವೀ. ಹೆಗ್ಗಡೆ

ಉಜಿರೆ: ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಕುತೂಹಲದೊಂದಿಗೆ ಸಂತಸದಾಯ ಕಲಿಕೆ ಸಾಧ್ಯವಾಗುತ್ತದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.
ಅವರು ಗುರುವಾರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ರೋಬೋಟ್ “ಶ್ರುತಿ” ಜೊತೆಗೆ ವಿಶೇಷ ಸಂವಹನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಿದರು.

ರೋಬೋಟ್ ಬಳಕೆಯಿಂದ ಕಲಿಕೆಗೆ ಪೂರಕ ವಾತಾವರಣ ಉಂಟಾಗಿ ವಿದ್ಯಾರ್ಥಿಗಳ ವೈಜ್ಞಾನಿಕ ಮನೋಭಾವ ಹಾಗೂ ಯೋಚನಾಲಹರಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.
ಎಲ್ಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳೂ ಕುತೂಹಲದಿಂದ ಸಂವಹನ ಮಾಡಿ ಸಂತಸಪಟ್ಟರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಟ್ರಸ್ಟಿ ಹರೀಶ್ ಕೃಷ್ಣಸ್ವಾಮಿ, ಶಾಲೆಯ ಮುಖ್ಯೋಪಾಧ್ಯಾಯರಾದ ಕಮಲ್‌ತೇಜ್ ರಜಪೂತ್ ಮತ್ತು ಶಿಕ್ಷಕರು ಸಂವಹನದಲ್ಲಿ ಭಾಗವಹಿಸಿದರು.

Leave a Reply

Your email address will not be published. Required fields are marked *