ಉಜಿರೆ: ಗ್ರಾಮೀಣ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ ಸಮಾರಂಭವು ರುಡ್‍ಸೆಟ್ ಸಂಸ್ಥೆಯಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಶ್ರೀ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್‍ನ ಕಾರ್ಯದರ್ಶಿಯಾದ ಎ.ವಿ, ಶೆಟ್ಟಿಯವರು ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸುತ್ತಾ "ಜೀವನಕ್ಕಾಗಿ ವ್ಯವಹಾರ ಇರಲಿ ವ್ಯವಹಾರಕ್ಕಾಗಿ ಜೀವನ ಬೇಡ ಉದ್ಯಮದಲ್ಲಿ ಸವಾಲುಗಳು ಬಂದಾಗ ಮುನ್ನುಗ್ಗುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ" ಎಂದು ಹಿತವಚನ ನೀಡಿದರು.

ರುಡ್‍ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಎಮ್. ಜನಾರ್ದನ್‍ರವರು ಅಧ್ಯಕ್ಷೀಯ ಮಾತುಗಳನ್ನಾಡಿ "ಪ್ರಾಮಾಣಿಕವಾಗಿ ವ್ಯವಹರಿಸಿ" ಎಂದರು. ನಿರ್ದೇಶಕರಾದ ಪಡದಯ್ಯ ಹಿರೇಮಠ್‍ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ  ಅನಸೂಯ ವಂದಿಸಿದರು. 13 ದಿನಗಳ ಈ ಕಾರ್ಯಕ್ರಮದಲ್ಲಿ 22 ಶಿಬಿರಾರ್ಥಿಗಳು ಭಾಗವಹಿಸಿದ್ದರು.