ಉಡುಪಿ ಮಾರ್ಚ್ 31 (ಕರ್ನಾಟಕ ವಾರ್ತೆ): ದೇಶದಾದ್ಯಂತ ವ್ಯಾಪಕವಾಗಿ ಕೋವಿಡ್-19 ಹರಡುತ್ತಿರುವ ಪ್ರಯುಕ್ತ ರಾಜ್ಯದಲ್ಲಿ ಲಾಕ್ ಡೌನ್ ಘೋಷಣೆ ಯಾಗಿರುವುದರಿಂದ , ರೈತರಿಗೆ ಕೃಷಿ ಪರಿಕರಗಳ ಲಭ್ಯತೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ವಹಿಸಬೇಕಾಗಿರುವುದು ಅತ್ಯವಶ್ಯವಾಗಿರುತ್ತದೆ. ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ,ಪೀಡೆನಾಶಕಗಳು, ಕೃಷಿ ಕೊಯ್ಲು ಯಂತ್ರೋಪಕರಣಗಳ ಸಾಗಣೆ ಯಲ್ಲಿ ಕೆಳಗಿನಂತೆ ನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳುವುದು
1.ಅಗತ್ಯ ವಸ್ತುಗಳ ಸೇವೆಯಡಿ ಕೃಷಿ ಪರಿಕರಗಳಾದ ಬಿತ್ತನೆ ಬೀಜ, ಗೊಬ್ಬರ, ಪೀಡೆನಾಶಕ, ಹಾಗೂ ಕೃಷಿ ಯಂತ್ರೋಪಕರಣಗಳು ಸೇರುವುದರಿಂದ, ಸದರಿ ಪರಿಕರಗಳ ವಿತರಣೆ ಸಮಯದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳನ್ನು ತಪ್ಪದೆ ಪಾಲಿಸಲು ಸಂಬಂಧಿಸಿದ ವಿತರಕರಿಗೆ ಕಡ್ಡಾಯಗೊಳಿಸುವುದು.
2.ವಿತರಣಾ ಸಮಯದಲ್ಲಿ ಗೊಂದಲಗಳಿಗೆ ಎಡೆಮಾಡದೆ, ಕೃಷಿ ಪರಿಕರಗಳ ವಿತರಣೆಗಾಗಿ ಅನುಮತಿ ಚೀಟಿಯನ್ನು ಅಧಿಕೃತ ಮಾರಾಟ/ವಿತರಕರಿಗೆ ನೀಡಲು ಕ್ರಮ ಕೈಗೊಳ್ಳುವುದು.
3.ಪರಿಕರಗಳನ್ನು ಖರೀದಿಸುವ ವೇಳೆಯಲ್ಲಿ ರೈತರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮಾರಾಟ ಮಳಿಗೆಯ ಮುಂಭಾಗದಲ್ಲಿ ಗುರುತುಗಳನ್ನು ಮಾಡುವುದರೊಂದಿಗೆ, ರೈತರಿಗೆ ಸ್ಯಾನಿಟೈಜರ್ಸ್/ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡಲು ಪರಿಕರ ಮಾರಾಟ/ವಿತರಕರಿಗೆ ಸೂಚನೆ ನೀಡುವುದು. ಆದಷ್ಟು ಮುಖಗವಸು ಹಾಕಿಕೊಳ್ಳಲು ಅರಿವು ಮೂಡಿಸಲು ಕ್ರಮ ವಹಿಸುವುದು.
4.ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಯಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೀಡಿರುವ ಸೂಚನೆಗಳನ್ನು ಹಾಗೂ ಸುರಕ್ಷಿತ ಕ್ರಮಗಳ ನಿಯಮಗಳನ್ನು ಉಲ್ಲಂಘಿಸಿದ ಮಾರಾಟ/ವಿತರಕರ ಪರವಾನಗಿಯನ್ನು ಅಮಾನತು/ರದ್ದುಗೊಳಿಸಲು ಕ್ರಮ ವಹಿಸುವುದು.
5.ಯಾವುದೇ ಕಾರಣಕ್ಕಾಗಿ ಮೇಲಿನ ಅಗತ್ಯ ಸೇವೆಗಳ ಲಭ್ಯತೆಯಲ್ಲಿ ತೊಂದರೆಯಾಗದಂತೆ ಕ್ರಮವಹಿಸಲು ವಾಹನ ಸೌಲಭ್ಯದ ಅಗತ್ಯವಿರುವುದರಿಂದ ವಾಹನ ಚಾಲಕರಿಗೆ ಅಗತ್ಯ ಸೇವೆಗಾಗಿ ಎಂದು ಚೀಟಿ ನೀಡಿ ಸೇವೆಯನ್ನು ಪಡೆಯುವುದು, ಸರ್ಕಾರಿ ವಾಹನ ಚಾಲಕರು ಲಭ್ಯವಿಲ್ಲದಿದ್ದಲ್ಲಿ ಖಾಸಗಿ ಚಾಲಕರ ಸೇವೆಯನ್ನು ಪಡೆಯಲು ಕ್ರಮ ವಹಿಸುವುದು.
6.ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳಾದ ಬೀಜ, ಗೊಬ್ಬರ, ಪೀಡೆನಾಶಕಗಳು, ಕೃಷಿ ಕೊಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಅಊSಅ ಗಳನ್ನು ಬೆಳ್ಳಿಗೆ 7.00 ರಿಂದ 11.00 ಘಂಟೆಯವರೆಗೆ ಸಮಯ ನಿಗಧಿಪಡಿಸಲಾಗಿದ್ದು ಅದೇ ಸಮಯದಲ್ಲಿ ಮಾರುವುದು ಮತ್ತು ಖರೀದಿಸುವುದು.
ಕೃಷಿ ಚಟುವಟಿಕೆಗಳಿಗೆ ಅನುವಾಗುವಂತೆ ಅಗತ್ಯ ವಸ್ತುಗಳ ವಿತರಣೆಯ ಸಮಯದಲ್ಲಿ ಈ ಮೇಲೆ ತಿಳಿಸಿರುವ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.