ಉಡುಪಿ :  ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಸತತವಾಗಿ ನಾಲ್ಕನೇ ಬಾರಿಗೆ ಆಯ್ಕೆಯಾಗಿರುವ ರವಿರಾಜ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಪ್ರಕಾಶ್‍ಚಂದ್ರ ಶೆಟ್ಟಿಯವರಿಗೆ ಗುರುವಾರ ಉಡುಪಿ ಡೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರಿಂದ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಜಿ.ವಿ. ಹೆಗ್ಡೆ ಸನ್ಮಾನಿಸಿದರು.

ಉಪ ವ್ಯವಸ್ಥಾಪಕರುಗಳಾದ ಲಕ್ಕಪ್ಪ, ಮುನಿರತ್ನಮ್ಮ, ಡಾ ಅನಿಲ್ ಕುಮಾರ್ ಶೆಟ್ಟಿ, ಡಾ ಮನೋಹರ್, ಡಾ ರವಿರಾಜ ಉಡುಪ, ಡಾ ಮಾಧವ ಐತಾಳ್ ಹಾಗೂ ಇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಲಕ್ಕಪ್ಪ ಸ್ವಾಗತಿಸಿದರು. ಸುಧಾಕರ್ ಕಾರ್ಯಕ್ರಮ ನಿರೂಪಿಸಿದರು, ಶಂಕರ್ ನಾಯ್ಕ್ ವಂದಿಸಿದರು.