ಉಡುಪಿ: ಕಾರ್ಕಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಛೇರಿಯ ಹಿರಿಯ ಮೇಲ್ವಿಚಾರಕಿ ರಾಜೇಶ್ವರಿ ಭಟ್ ಇವರ ಬೀಳ್ಕೊಡುಗೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಆರ್. ಶೇಷಪ್ಪನವರು, ಸುಧೀರ್ಘ ಸೇವೆಯನ್ನು ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ರಾಜೇಶ್ವರಿ ಭಟ್ ಅವರನ್ನು ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಮಾಲಿನಿ ಜೆ ಶೆಟ್ಟಿ, ಕಾರ್ಕಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕುಮಾರ್ ನಾಯಕ್, ಮಕ್ಕಳ ರಕ್ಷಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಉಪಸ್ಥಿತರಿದ್ದರು. ನಿವೃತ್ತರು ಅಂಗನವಾಡಿ ಸಹಾಯಕರ ಸಂಘಕ್ಕೆ ಸಹಾಯಧನದ ಚೆಕ್ ನೀಡುವ ಮೂಲಕ ಅವರ ಅಭಿವೃದ್ಧಿಗೆ ಮಾದರಿಯಾದರು. ಉಮಾ ಸ್ವಾಗತಿಸಿದರು, ಸೌಭಾಗ್ಯ ನಿರೂಪಿಸಿದರು, ವಸಂತಿ ವಂದಿಸಿದರು.