ಉಡುಪಿ : ಖ್ಯಾತ ಸಂಖ್ಯಾಶಾಸ್ತ್ರಜ್ಞ ಪ್ರೋ.ಪಿ.ಸಿ ಮಹಾಲನೋಬೀಸ್, ಇವರ ಜನ್ಮ ದಿನಾಚರಣೆಯನ್ನು ಸಾಂಖ್ಯಿಕ ದಿನಾಚರಣೆಯಾಗಿ  ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅಧ್ಯಕ್ಷತೆ ವಹಿಸಿ, ಉದ್ಘಾಟಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ್ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ದಿನಾಚರಣೆಯ ಮಹತ್ವ ಮತ್ತು ಯಾವುದೇ ಯೋಜನೆಗಳ ಅನುಷ್ಠಾನ ಮತ್ತು ಯಶಸ್ಸಿಗೆ ಕಾಲಮಿತಿಯ ಉತ್ತಮ ಗುಣಮಟ್ಟದ ಅಂಕಿ ಅಂಶದ ಅವಶ್ಯಕತೆಯನ್ನು ತಿಳಿಸಿದರು.

ಮಂಗಳೂರು ಮೀನುಗಾರಿಕಾ ವಿಶ್ವ ವಿದ್ಯಾಲಯದ ನಿವೃತ್ತ ಪ್ರೋಫೆಸರ್ ರಾಮಚಂದ್ರ ಭಟ್ ಸುಸ್ಥಿರ ಅಭಿವೃದ್ಧಿಯ ಗುರಿಗಳು ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ. ನಾಗರಾಜ ರಾವ್ ಸ್ವಾಗತಿಸಿ, ನಿರೂಪಿಸಿದರು.