ಮಹಾಮಾರಿ ಕರೊನಾ ವೈರಸ್ ಸೋಂಕಿನಿಂದಾಗಿ ಬಿಜೆಪಿ ಸಂಸದ ಅಶೋಕ ಗಸ್ತಿ (55) ಮಣಿಪಾಲ್ ಆಸ್ಪತ್ರೆಯಲ್ಲಿ ಗುರುವಾರ ನಿಧನರಾದರು.

ರಾಯಚೂರು ಮೂಲದ ಅಶೋಕ ಗಸ್ತಿಯವರು ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಕರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ.