ಕಾರ್ಕಳ: 65ನೇ ವನ್ಯಜೀವಿ ಸಪ್ತಾಹ 2019ರ ಆಚರಣೆಯ ಅಂಗವಾಗಿ ಬುಧವಾರ ಕುದುರೆಮುಖ ವನ್ಯಜೀವಿ ವಿಭಾಗ, ಕಾರ್ಕಳ ಇವರ ವತಿಯಿಂದ ಸಾರ್ವಜನಿಕರು ಮತ್ತು ಶಾಲಾ ಮಕ್ಕಳಿಗೆ ವನ್ಯಜೀವಿ ಅರಿವು ಮೂಡಿಸುವ ಜನಾಂದೋಲನ ಕುರಿತು ಜಾಥ ಕಾರ್ಯಕ್ರಮವು ನಡೆಯಿತು.
ಜಾಥಾವನ್ನು ಕಾರ್ಕಳ ಶಾಸಕ ಸುನೀಲ್ ಕುಮಾರ್ ಹಸಿರು ನಿಶಾನೆ ತೋರುವ ಮೂಲಕ ಉದ್ಗಾಟಿಸಿದರು. ಕಾರ್ಕಳ ತಾಲೂಕು ಕಚೇರಿ, ಬಂಡೀಮಠ ಬಸ್ಸು ನಿಲ್ದಾಣ, ವೆಂಕಟರಮಣ ದೇವಸ್ಥಾನ, ಮುಖ್ಯ ಬಸ್ಸು ನಿಲ್ದಾಣದಿಂದ ಅನಂತಶಯನ ವೃತ್ತದವರೆಗೆ ಜಾಥ ನಡೆಯಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭವು ಕಸ್ತೂರಿ ರಂಗವೇದಿಕೆಯಲ್ಲಿ ನಡೆಯಿತು. ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ರುಥ್ರನ್.ಪಿ, ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಕಾರ್ಕಳ ವನ್ಯಜೀವಿ ವಲಯದಲ್ಲಿ ವಲಯ ಮಟ್ಟದಲ್ಲಿ ಜರುಗಿಸಿದ ವಿವಿಧ ಸ್ಪರ್ದೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಸಮಾರೋಪ ಕಾರ್ಯಕ್ರಮದಲ್ಲಿ ಕಾರ್ಕಳ, ಕುದುರೆಮುಖ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ:ಬಸವರಾಜ.ಕೆ.ಎನ್, ಸಿದ್ದಾಪುರ ವನ್ಯಜೀವಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಗವಾನ್ ದಾಸ್ ಕುಡ್ತಲ್ಕರ್, ಉಪನ್ಯಾಸಕಿ ಜ್ಯೋತಿ ಶೆಟ್ಟಿ, ಕಾರ್ಕಳ ಮಂಜುನಾಥ ಪೈ ಪದವಿ ಕಾಲೇಜು ಉಪನ್ಯಾಸಕ ಸುಮಂತ್ ಕುಮಾರ್ ಜೈನ್, ಸರ್ಕಾರಿ ಪ್ರೌಢಶಾಲೆ ಪೆರ್ವಾಜೆ, ಮಂಜುನಾಥ ಪೈ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳು, ಇಲಾಖಾ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಲಯ ಅರಣ್ಯ ಅಧಿಕಾರಿ ರಾಘವೇಂದ್ರ ಗಣಪತಿ ನಾಯ್ಕ್ ಸ್ವಾಗತಿಸಿದರು. ನಾಗರಾಜ್. ಎಮ್. ಪಟ್ವಾಲ್ ನಿರೂಪಿಸಿದರು.