ಮಂಗಳೂರು:- ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಜಾರಿಗೊಳಿಸಿದ ಸ್ವತಂತ್ರ ಭಾರತದ ಅತ್ಯಂತ ಕರಾಳ ಕೃಷಿ ಕಾನೂನಿನ ವಿರುದ್ಧವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪರ್ಟಿ ಆಫ್ ಇಂಡಿಯಾ ದೇಶವ್ಯಾಪಿ ಅಕ್ಟೋಬರ್ ತಿಂಗಳಿನಲ್ಲಿ "ಜಾಗೋ ಕಿಸಾನ್" ಕೃಷಿ ಸಂಹಾರ ಬಿಜೆಪಿಯ ಹುನ್ನಾರ ಎಂಬ ಹೆಸರಿನಲ್ಲಿ ಅಭಿಯಾನ ಕೈಗೊಂಡಿದ್ದು ಇದರ ಭಾಗವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಂತ ಬಿತ್ತಿಪತ್ರ ಅಂಟಿಸುವುದು,ಕರಪತ್ರ ವಿತರಣೆ, ರೈತ ಮತ್ತು ಸಮಾನಮನಸ್ಕ ಸಂಘಟನೆಗಳ ನಾಯಕರೊಂದಿಗೆ ಸಮಾಲೋಚನಾ ಸಭೆ, ಪಾದಯಾತ್ರೆ,ಕರ್ನರ್ ಮೀಟ್,ಮಾನವ ಸರಪಳಿ ಈ ರೀತಿಯ ವಿವಿಧ ಕಾರ್ಯಕ್ರಮಗಳ ಮೂಲಕ ಈ ಅಭಿಯಾನವನ್ನು ನಡೆಸಲಿದ್ದೇವೆ ಮತ್ತು ಅಭಿಯಾನದ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮ ಕಡಬ ತಾಲೂಕಿನ ಕೊಂಬಾರ್ ಗ್ರಾಮದ ಗದ್ದೆಯಲ್ಲಿ ವಿಭಿನ್ನ ರೀತಿಯಲ್ಲಿ ನಡೆಯಲಿದೆ. ಅಭಿಯಾನವು ಅಕ್ಟೋಬರ್ 31 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾದ್ಯಂತ ನಾನಾ ಕಡೆಗಳಲ್ಲಿ ಮಾನವ ಸರಪಳಿ ನಡೆಸುವ ಮೂಲಕ ಸಮಾಪ್ತಿಗೊಳ್ಳಲಿದೆ ಎಂದು ಜಾಗೋ ಕಿಸಾನ್ ಅಭಿಯಾನದ ಜಿಲ್ಲಾ ಉಸ್ತುವಾರಿ ಆಂಟನಿ.ಪಿಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.