ನವದೆಹಲಿ:-ದೇಶದಲ್ಲಿ ಕಿಲ್ಲರ್ ಕೊರೊನಾ ವೈರಸ್ ಸೋಂಕಿನ ಆರ್ಭಟದಲ್ಲಿ ಕೊಂಚ ಕಡಿಮೆಯಾಗಿದ್ದು, ಸಕ್ರಿಯ ಪ್ರಕರಣಗಳಿಗಿಂತ ಚೇತರಿಕೆಯಲ್ಲಿ ಮೂರು ಪಟ್ಟು ಹೆಚ್ಚಳ ಕಂಡುಬಂದಿದೆ.
ಸಾಂಕ್ರಾಮಿಕ ರೋಗದ ಮಹಾಸೋಟದಲ್ಲಿ ನಾಲ್ಕು ದಿನಗಳ ಏರಿಕೆ ನಂತರ ನಿನ್ನೆ ಹೊಸ ಪ್ರಕರಣಗಳಲ್ಲಿ ಅಲ್ಪ ಇಳಿಕೆ ವರದಿಯಾಗಿದೆ. ನಿನ್ನೆಯಿಂದ ಇಂದು ಮುಂಜಾನೆವರೆಗೆ 61,408ಮಂದಿಗೆ ಮತ್ತೆ ವೈರಸ್ ರೋಗ ತಗುಲಿದ್ದು, 836 ಸಾವುಗಳು ಸಂಭವಿಸಿದೆ.
ದೇಶದಲ್ಲೀಗ ಸೋಂಕಿತರ ಸಂಖ್ಯೆ31.06 ಲಕ್ಷ ಹಾಗೂ ಸಾವಿನ ಸಂಖ್ಯೆ57,540 ದಾಟಿರುವುದು ಆತಂಕದ ವಿದ್ಯಮಾನವಾಗಿದೆ. ಕೋವಿಡ್ ಸಾಂಕ್ರಾಮಿಕರೋಗ ಮಹಾಸೋಟದ ಪ್ರಕೋಪ ಆಗಸ್ಟ್ ಮೂರು ಮತ್ತು ಕೊನೆಯ ವಾರ ಏರುಗತಿಯಲ್ಲೇ ಸಾಗಿದ್ದು (ಸೋಂಕು ಇಳಿಕೆಯ ಒಟ್ಟುಐದು ದಿನಗಳನ್ನು ಹೊರತುಪಡಿಸಿ) ಪಾಸಿಟಿವ್ ಮತ್ತು ಸಾವು ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಹೆಚ್ಚಾಗುತ್ತಿದೆ.
ಅಲ್ಲದೇ ಕಳೆದ ವಾರ ವಿಶ್ವದಲ್ಲೇ ಅತಿ ಹೆಚ್ಚು ಸಂಖ್ಯೆಯ ಸೋಂಕು ಪ್ರಕರಣಗಳು ಭಾರತದಲ್ಲಿ ವರದಿಯಾಗಿದೆ. ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.75.27ರಷ್ಟು ವೃದ್ದಿ ಕಂಡುಬಂದಿದ್ದು, ಈವರೆಗೆದೇಶದಲ್ಲಿ 3.59ಕೋಟಿಗೂ ಹೆಚ್ಚುಜನರ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ ಸಕ್ರಿಯ ಪ್ರಕರಣಗಳ ಹೆಚ್ಚಳವೂ ಸಹ ಆತಂಕಕ್ಕೆ ಕಾರಣವಾಗಿದೆ.
ಇದರ ನಡುವೆಯೂ 23.38ಲಕ್ಷಕ್ಕೂ ಹೆಚ್ಚು ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದಾರೆ. ಭಾನುವಾರ ಒಂದೇ ದಿನ 836ಮಂದಿ ಮೃತಪಟ್ಟಿದ್ದು, ಒಟ್ಟಾರೆ ಸಾವಿನ ಸಂಖ್ಯೆ58,000 ಸನಿಹದಲ್ಲಿದೆ. ಈವರೆಗೆ ಭಾರತದಲ್ಲಿ ರೋಗ ಪೀಡಿತರ ಪ್ರಮಾಣ 31,06,348 ದಾಟಿದೆ.
ದೇಶದಲ್ಲಿ ಈಗ 7,10,771 ಆಕ್ಟಿವ್ ಕೇಸ್ಗಳಿದ್ದು, 23,38,035ಕ್ಕೂ ಹೆಚ್ಚುರೋಗಿಗಳು ಚೇತರಿಸಿಕೊಂಡು, ಗುಣಮುಖರಾಗಿದ್ದಾರೆ.ಆಕ್ಟಿವ್ ಕೇಸ್ಗಳಿಗೆ ಹೋಲಿಸಿದಲ್ಲಿ, ರಿಕವರಿರೇಟ್ನಲ್ಲಿ ಮೂರು ಪಟ್ಟುಗಳಷ್ಟು ಹೆಚ್ಚಳ ಕಂಡುಬಂದಿರುವುದು ಸಮಾಧಾನಕರ ಸಂಗತಿ.
ಚೇತರಿಕೆ ಪ್ರಮಾಣಶೇ.75.27ರಷ್ಟುಏರಿಕೆಮತ್ತು ಸಾವಿನ ಪ್ರಮಾಣ ಶೇ.1.85ರಷ್ಟು ಇಳಿದಿದೆ ಎಂದುಕೇಂದ್ರಆರೋಗ್ಯ ಸಚಿವಾಲಯ ತಿಳಿಸಿದೆ. ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳುವರದಿಯಾಗುತ್ತಲೇ ಇವೆ.
ದೇಶದ ವಿವಿಧ ರಾಜ್ಯಗಳಲ್ಲಿ ನಿನ್ನೆಒಂದೇ ದಿನ 6,09,917ಜನರ ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 3,59,02,137ಕೋಟಿಗೂ ಹೆಚ್ಚು ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.