ಪಡುಬಿದ್ರಿ: ಖಾಸಗಿ ಬಸ್ಸು ಹಾಗೂ ಕಾರು ನಡುವೆ ನಡೆದ ರಣಭೀಕರ ಅಪಘಾತದಲ್ಲಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಬೀಡಿನಕೆರೆ ಬಳಿ ಇಂದು ನಡೆದಿದೆ.

ಮಂಗಳೂರುನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಬಲೆನೊ ಕಾರೊಂದು ತಕ್ಷಣ ಡಿವೈಡರ್ ಏರಿ ತಿರುಗಿ ಮಂಗಳೂರು ಕಡೆಗೆ ಸಂಚರಿಸುತಿದ್ದ ವೇಗದೂತ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಘಟನೆ ನಡೆದ ಸ್ಥಳದಲ್ಲಿ ಗಾಯಾಳುಗಳನ್ನು ಕಾರಿನಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರು ಸಹಕರಿಸಿ ಪಡುಬಿದ್ರಿ ಠಾಣಾಧಿಕಾರಿ ಹಾಗೂ ಪೊಲೀಸರು ಅಪಘಾತ ಸ್ಥಳಕ್ಕೆ ಆಗಮಿಸಿ ರಸ್ತೆ ತೆರವು ಮಾಡಿ ಸುಗಮ ಸಂಚಾರ ವ್ಯವಸ್ಥೆ ಮಾಡಿಕೊಟ್ಟರು.