ಬಂಟ್ವಾಳ : 2015ರ ನವೆಂಬರ್ ತಿಂಗಳಲ್ಲಿ ಟಿಪ್ಪುಸುಲ್ತಾನ್ ಜಯಂತಿಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋಮು ಗಲಭೆ ನಡೆಯುವ ಉದ್ದೇಶದಿಂದ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ನಾವೂರ ನಿವಾಸಿ ಹರೀಶ್ ಪೂಜಾರಿ ಹಾಗೂ ಶಮಿವುಲ್ಲಾ, ಇವರಲ್ಲಿ ಅಮಾಯಕ ಹರೀಶ್ ಪೂಜಾರಿಯನ್ನು ಮಾರಕ ಅಸ್ತ್ರದಿಂದ ಕೊಲೆ ಮಾಡಲಾಯಿತು. ಘಟನೆ ನಡೆದ ಸಂದರ್ಭದಲ್ಲಿ ಮೃತ ಯುವಕನ ಜೊತೆಗಿದ್ದ ಶಮಿವುಲ್ಲಾ ಎಂಬ ಯುವಕ ಈ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದಾನೆ. ಪ್ರಕರಣ ಈಗ ನ್ಯಾಯಲದಲ್ಲಿ ವಿಚಾರಣೆ ಹಂತದಲ್ಲಿದೆ ಹರೀಶ್ ಪೂಜಾರಿ ಕೊಲೆ ಆರೋಪಿಗಳು ಹಾಗೂ ಅವರ ಬೆಂಬಲಿಗರು ನ್ಯಾಯಾಲಯಕ್ಕೆ ಬಂದು ಸಾಕ್ಷಿ ಹೇಳದಂತೆ ಶಮಿವುಲ್ಲಾ ಅವರಿಗೆ ಜೀವ ಬೆದರಿಕೆ ಒಡ್ಡುತ್ತಿದ್ದಾರೆ ಇಂತಹ ಬೆಳವಣಿಗೆಯಿಂದ ಶಮಿವುಲ್ಲಾ ಅವರು ಜೀವ ಬೆದರಿಕೆಯಿಂದ ಬದುಕುವಂತಾಗಿದೆ ಇದರಿಂದ ಪ್ರಕರಣದ ವಿಚಾರಣೆಗೆ ಅಡ್ಡಿಯಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ವಿಚಾರವಾಗಿ ಮಾಜಿ ಸಚಿವರಾದ ರಮಾನಾಥ ರೈ ಅವರ ನೇತ್ರತ್ವದಲ್ಲಿ ದ.ಕ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್ ಅವರನ್ನು ಭೇಟಿ ಮಾಡಿ ಪ್ರಕರಣದ ಸಾಕ್ಷಿಯಾದ ಶಮಿವುಲ್ಲಾ ಅವರಿಗೆ ಪೋಲಿಸ್ ಭದ್ರತೆ ಒದಗಿಸುವಂತೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತು. ಶಮಿವುಲ್ಲಾ ಅವರಿಗೆ ಯಾವುದೇ ರೀತಿ ತೊಂದರೆಯಾದಲ್ಲಿ ಪೋಲಿಸ್ ಇಲಾಖೆ ಹೊಣೆಗಾರರಾಗಿರುತ್ತಾರೆ ಎಂದು ತಿಳಿಸಲಾಯಿತು ಈ ನಿಯೋಗದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಎಮ್.ಎಸ್ ಮಹಮ್ಮದ್, ಪದ್ಮಶೇಖರ್ ಜೈನ್, ಮಂಜುಳ ಮಾವೆ, ಅನಿತಾ ಹೇಮನಾಥ್ ಶೆಟ್ಟಿ, ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕುಲಾಲ್, ಪುರಸಭೆ ಸದಸ್ಯರಾದ ಗಂಗಾಧರ ಪೂಜಾರಿ, ಮಾಜಿ ಅಕ್ರಮ ಸಕ್ರಮ ಅಧ್ಯಕ್ಷರಾದ ಮಾಯಿಲಪ್ಪ ಸಾಲ್ಯನ್, ಮಾಜಿ ಬೂಡಾ ಅಧ್ಯಕ್ಷರಾದ ಸದಾಶಿವ ಬಂಗೇರ, ಮುಖಂಡರಾದ ಜಗದೀಶ್ ಕೊಯಿ¯, ಲೋಕೇಶ್ ಸುವರ್ಣ, ನವಾಝ್ ಬಡಕಬೈಲು, ಚಂದ್ರಶೇಖರ್ ಪೂಜಾರಿ ಬಾಳ್ತಿಲ, ಎ.ಕೆ ಶಾರೂಕ್ ಅಹಮ್ಮದ್, ವಿಕ್ಟರ್ ಪಾಯಸ್, ಸದಾನಂದ ಶೆಟ್ಟಿ ಕಾವಳಕಟ್ಟೆ ಉಪಸ್ಥಿತರಿದ್ದರು.
