ಮಂಗಳೂರು: ಅಸಂಘಟಿತ ವಲಯದಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್‍ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಸಲ್ಲಿಸಬೇಕಾದ ದಾಖಲೆಗಳು ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಛೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್‍ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲ ವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಪೆಬ್ರವರಿ 18ರ ಒಳಗಾಗಿ ಕಾರ್ಮಿಕ ಅಧಿಕಾರಿ, ದ.ಕ ಉಪ ವಿಭಾಗ-1, ಮಂಗಳೂರು, ಭಾರತ್‍ ಬೀಡಿ ಎದುರು, ಬಂಟ್ಸ್‍ ಹಾಸ್ಟೇಲ್, ಮಂಗಳೂರು ಕಚೇರಿಗೆ ಸಲ್ಲಿಸಬೇಕೆಂದು ಕಾರ್ಮಿಕಅಧಿಕಾರಿ, ದ.ಕ ಜಿಲ್ಲೆ ಮಂಗಳೂರು ತಿಳಿಸಿದ್ದಾರೆ.