ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯ ಪ್ರಯುಕ್ತ ಗಾಂಧೀ 150 ಕಾರ್ಯಕ್ರಮವು ನಡೆಯಿತು, ಈ ಪ್ರಯುಕ್ತ ಮಂಗಳೂರಿನ ಕರಾವಳಿ ಉತ್ಸವ ಮೈದಾನದಿಂದ ಲಾಲ್ಭಾಗ್, ಎಂ.ಜಿ ರೋಡ್, ಪಿ.ವಿ.ಎಸ್, ಬಂಟ್ಸ್ ಹಾಸ್ಟೆಲ್, ಜ್ಯೋತಿ ಸರ್ಕಲ್ ಮಾರ್ಗವಾಗಿ ಹಂಪನಕಟ್ಟಾ ಮುಖಾಂತರ ನಗರದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಕಾಲ್ನಡಿಗೆ ಜಾಥಾ ಯಶಸ್ವಿ ಯಾಗಿ ನಡೆದಿತ್ತು. ಅದಲ್ಲದೇ ತದ ನಂತರ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದಲ್ಲಿ ಬಹಿರಂಗ ಸಭೆಯು ನಡೆಯಿತು.
ಮಂಗಳೂರು: ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯ ಪ್ರಯುಕ್ತ ಗಾಂಧೀ 150 ಕಾರ್ಯಕ್ರಮ
ಈ ಸಂದರ್ಭದಲ್ಲಿ ಎ.ಐ.ಸಿ.ಸಿ ಕಾರ್ಯದರ್ಶಿ ಹಾಗೂ ಮೈಸೂರು ವಿಭಾಗದ ಉಸ್ತುವಾರಿ ಪಿ.ಸಿ ವಿಷ್ಣುನಾಥನ್, ಮಾಜಿ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ಬಿ.ರಮಾನಾಥ ರೈ, ಯು.ಟಿ ಖಾದರ್, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್, ವಿಧಾನಪರಿಷತ್ತು ಶಾಸಕರಾದ ಐವನ್ ಡಿ'ಸೋಜಾ, ಮಾಜಿ ಶಾಸಕರುಗಳಾದ ಅಭಯಚಂದ್ರ ಜೈನ್, ಕೆ. ವಸಂತ ಬಂಗೇರ, ಶಕುಂತಲಾ ಶೆಟ್ಟಿ, ಮೊಯ್ದಿನ್ ಬಾವ, ಜೆ.ಆರ್ ಲೋಬೋ ಮತ್ತು ಡಾ|| ರಘ, ಮಿಥುನ್ ರೈ, ಮಾಜಿ ಸಂಸದರು ಹಾಗೂ ಶಾಸಕರುಗಳು, ಹಿರಿಯ ಕಾಂಗ್ರೆಸ್ ಮುಖಂಡರುಗಳು ಭಾಗವಹಿಸಿದರು .