ಬೆಂಗಳೂರು : ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಎಸ್ಎಸ್ಎಲ್ ಸಿ ಪರೀಕ್ಷೆಗೆ ಹಾಜರಾಗದೇ ಉಳಿದಿರುವ ವಿದ್ಯಾರ್ಥಿಗಳಿಗೆ ರಾಜ್ಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತೊಂದು ಅವಕಾಶವನ್ನು ಕಲ್ಪಿಸಿದೆ. ಸಪ್ಟೆಂಬರ್ 21 ರಿಂದ ಸಪ್ಟೆಂಬರ್ 29ರ ವರೆಗೆ ಪೂರಕ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು, ಬೆಳಗ್ಗೆ 10.30 ರಿಂದಲೇ ಪರೀಕ್ಷೆ ಆರಂಭವಾಗಲಿದ್ದು, ಕೊರೊನಾ ಹಾಗೂ ಆರೋಗ್ಯ ಸಮಸ್ಯೆಯಿಂದ ಮುಖ್ಯ ಪರೀಕ್ಷೆ ಬರೆಯದೇ ಇರುವ ಅಭ್ಯರ್ಥಿಗಳನ್ನು ಪೂರಕ ಪರೀಕ್ಷೆಯಲ್ಲಿ ಮೊದಲ ಅವಕಾಶ ಎಂದೇ ಪರಿಗಣಿಸಲಾಗುತ್ತದೆ. ಇಂತಹ ಅಭ್ಯರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ, ಮುಖ್ಯ ಪರೀಕ್ಷೆಯಲ್ಲಿ ಅನುತೀರ್ಣರಾಗಿರುವ ವಿದ್ಯಾರ್ಥಿಗಳು ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿದ್ದಾರೆ. ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಗೆ ಮುಖ್ಯ ಪರೀಕ್ಷೆಗೆ ಕೈಗೊಂಡಿರುವ ರೀತಿಯಲ್ಲಿಯೇ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.ಎಂದು ಮಂಡಳಿ ಸ್ಪಷ್ಟಪಡಿಸಿದೆ.
ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ:-
ಸೆಪ್ಟೆಂಬರ್ 21 ಗಣಿತ, ಸಮಾಜಶಾಸ್ತ್ರ
ಸೆಪ್ಟೆಂಬರ್ 22 ಪ್ರಥಮ ಭಾಷೆ (ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ)
ಸೆಪ್ಟೆಂಬರ್ 23 ಸಮಾಜಶಾಸ್ತ್ರ
ಸೆಪ್ಟೆಂಬರ್ 24 ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ)
ಸೆಪ್ಟೆಂಬರ್ 25 ತೃತೀಯ ಭಾಷೆ ( ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು)
ಸೆಪ್ಟೆಂಬರ್ 26 ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲಿಮೆಂಟ್ಸ್ ಆಫ್ ಎಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ
ಸೆಪ್ಟೆಂಬರ್ 28 ಬೆಳಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಸೆಪ್ಟೆಂಬರ್ 29 ಜಿಟಿಎಸ್ ಪ್ರಾಯೋಗಿಕ ಪರೀಕ್ಷೆ