ಹೆಬ್ರಿ : ಶಿವಪುರದ ನಿವಾಸಿ ಚಿಕ್ಕಮಗಳೂರಿನ ಖ್ಯಾತ ಉದ್ಯಮಿ ಸಮಾಜಸೇವಕ ಕೆ.ತುಕರಾಮ ಶೆಟ್ಟಿ ಅವರು ಶನಿವಾರ ಮೃತರಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಲಾಡ್ಜ್ ಉದ್ಯಮ ಮತ್ತು ಅಟೋಮೋಬೈಲ್ ನಡೆಸುತ್ತಿದ್ದರು. ಚಿಕ್ಕಮಗಳೂರು ಬಂಟರ ಸಂಘದ ಅಧ್ಯಕ್ಷರಾಗಿ, ವಿವಿಧ ಸಂಘಸಂಸ್ಥೆಗಳಲ್ಲಿ ಸಕ್ರೀಯರಾಗಿ ಜನಸೇವೆ ಮಾಡುತ್ತಿದ್ದರು. ಮೃತರು ಪತ್ನಿ ಮತ್ತು ಪುತ್ರರಾದ ಚಿಕ್ಕಮಗಳೂರು ಜಿಲ್ಲಾ ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರಾದ ಸಚಿನ್ ಶೆಟ್ಟಿ, ಸೊಸೆ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.