ಏಪ್ರಿಲ್ 5ರಂದು ಕಾರ್ಕಳದಲ್ಲಿ ಬೃಹತ್ ಬಿಜೆಪಿ ಕಾರ್ಯಕರ್ತರ ಸಮಾವೇಶ  ಕುರಿತು  ಪೂರ್ವಭಾವಿ ಸಭೆ


ಕಾರ್ಕಳ:  ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಏಪ್ರಿಲ್ 5 ರ ಶುಕ್ರವಾರ, ಕಾರ್ಕಳದಲ್ಲಿ ನಡೆಯಲಿರುವ ಬೃಹತ್  ಕಾರ್ಯಕರ್ತರ ಸಮಾವೇಶಕ್ಕೆ ಪೂರ್ವಭಾವಿಯಾಗಿ  ಹೆಬ್ರಿ ಶಕ್ತಿಕೇಂದ್ರದ ಕುಚ್ಚುರು ಬೇಳಂಜೆ, ವರಂಗ ಗ್ರಾಮಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಯಿತು.

ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿಯವರು ಏಪ್ರಿಲ್ 3 ರಂದು ಉಡುಪಿಯಲ್ಲಿ ನಾಮಪತ್ರ ಸಲ್ಲಿಸಿ, ಉಡುಪಿಯ ಕಡಿಯಾಳಿಯಲ್ಲಿ ನಡೆಯುವ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಹಸ್ರ ಸಂಖ್ಯೆಯಲ್ಲಿ ಕಾರ್ಕಳದ ಕಾರ್ಯಕರ್ತರು ಪಾಲ್ಗೊಳ್ಳುವ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಗಳ ಬಗ್ಗೆ ಈ ಸಭೆಯಲ್ಲಿ ಚರ್ಚಿಸಲಾಯಿತು.

ಮೂರನೇ ಅವಧಿಗೆ ಮತ್ತೋಮ್ಮೆ ಮೋದಿಯವರನ್ನು ಅಧಿಕಾರಕ್ಕೆ ತರುವುದೇ ನಮ್ಮ ಏಕೈಕ ಉದ್ದೇಶ, ಈ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರತರು ಒಗ್ಗೂಡಿ ಕಾರ್ಯಪ್ರವೃತ್ತರಾಗುವಂತೆ ಬಿಜೆಪಿ ಕ್ಷೇತ್ರಾಧ್ಯಕ್ಷರಾದ ನವೀನ ನಾಯಕ್  ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಸಭೆಯಲ್ಲಿ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುರೇಶ ಶೆಟ್ಟಿ ಶಿವಪುರ, ಹೆಬ್ರಿ ಶಕ್ತಿಕೇಂದ್ರದ ಅಧ್ಯಕ್ಷರಾದ ಲಕ್ಷ್ಮಿನಾರಾಯಣ್ ನಾಯಕ್,  ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷರಾದ ಸುಹಾಸ್ ಶೆಟ್ಟಿ, ಜ್ಯೋತಿ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.