ಕರ್ನಾಟಕದ 223 ತಾಲೂಕುಗಳು ಬರಪೀಡಿತ. ಸೋಮಾರಿ ಕೇಂದ್ರ ಸರಕಾರ ಪರಿಹಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಸದ್ಯ ಬಾಧಿತ ರೈತರಿಗೆ ರೂ. 2,000ದಷ್ಟಾದರೂ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸೂಚನೆ ನೀಡಿದರು.

ಮನೆಕಚೇರಿಯಲ್ಲಿ ಅವರು ಮಂತ್ರಿ ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು. ಕೇಂದ್ರ ಸರಕಾರವು ತನ್ನ ಕಿಸೆಯಿಂದ ಪರಿಹಾರ ನೀಡುವುದಿಲ್ಲ. ರಾಜ್ಯದ ತೆರಿಗೆ ಪಾಲು ನೀಡದೆ ಬಾಕಿ ಉಳಿಸಿಕೊಂಡಿದೆ. ರಾಜ್ಯದಲ್ಲಿ ಬರದ ಕಾರಣ 4,463 ಕೋಟಿ ರೂಪಾಯಿ ನಷ್ಟ ಆಗಿದೆ. ಈ ಬಗೆಗೆ ಕೇಂದ್ರ ಸರಕಾರಕ್ಕೆ ಬರೆಯಲಾಗಿತ್ತು. ಪ್ರಧಾನಿ ಮೋದಿಯವರು ಈ ಬಗೆಗೆ ಮಂತ್ರಿ ಸಭೆ ನಡೆಸಿ ಚರ್ಚಿಸಿಯೂ ಇಲ್ಲ ಎಂದು ಸಿದ್ದರಾಮಯ್ಯನವರು ಹೇಳಿದರು. 

ರಾಜ್ಯದಿಂದ ಕೇಂದ್ರದಲ್ಲಿ ಮಂತ್ರಿ ಆಗಿರುವವರು, ರಾಜ್ಯದ ಬಿಜೆಪಿ ಸಂಸದರು ಈ ನಿಟ್ಟಿನಲ್ಲಿ ಏನೂ ಮಾಡುತ್ತಿಲ್ಲ. ಉದ್ಯೋಗ ಖಾತರಿ ಯೋಜನೆಯಲ್ಲಿ ಒಬ್ಬರಿಗೆ ವರುಷಕ್ಕೆ 150 ದಿನಗಳ ಕೆಲಸ ಒದಗಿಸುವಂತೆ ಕೇಳಲಾಗಿತ್ತು. ಅದಕ್ಕೂ ಕೇಂದ್ರ ಸರಕಾರ ಒಪ್ಪಿಗೆ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿದರು.