ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಡಿಸೆಂಬರ್ 6ರಂದು ಅಂಬೇಡ್ಕರ್ ಪುಣ್ಯ ದಿನವನ್ನು ಆಚರಿಸಲಾಯಿತು. ದ. ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಅಂಬೇಡ್ಕರ್ ನೆನಪಿಸಿಕೊಂಡು ನುಡಿ ನಮನ ಸಲ್ಲಿಸಿದರು.

ಅಂಬೇಡ್ಕರ್ ರೀತಿಯ ಜ್ಞಾನಿ ಜಗತ್ತಿನಲ್ಲಿ ಬೇರೆ ಯಾರೂ ಇಲ್ಲ. ಅವರು ಕೊಟ್ಟ ಸಂವಿಧಾನವು ಸರ್ವರಿಗೂ ನ್ಯಾಯ ಒದಗಿಸಿದೆ ಎಂದು ಹರೀಶ್ ಕುಮಾರ್ ಹೇಳಿದರು.

ಮಾಜೀ ಮಂತ್ರಿ ರಮಾನಾಥ ರೈ ಅವರು ಮಾತನಾಡಿ ಭಾರತದ ಪರಿಸ್ಥಿತಿಗೆ ತಕ್ಕಂತೆ ಈ ದೇಶದಲ್ಲಿ ಮೀಸಲಾತಿ ಇದೆ. ಅದನ್ನು ನಾವೆಲ್ಲ ಒಪ್ಪಿದ್ದೇವೆ. ಅಂಬೇಡ್ಕರ್ ಅವರು ಅಭಿನಂದನಾರ್ಹರು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಲೆಟ್ ಪಿಂಟೋ, ಅಪ್ಪಿ, ಲುಕ್ಮಾನ್ ಬಂಟ್ವಾಳ, ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.