ಅರಬ್ಬೀ ಸಮುದ್ರದಲ್ಲಿ ಎದ್ದಿರುವ ಚಂಡಮಾರುತವು ಕೇರಳ ಮತ್ತು ಕರ್ನಾಟಕದ ಕರಾವಳಿ ಉದ್ದಕ್ಕೂ ಉತ್ತಮ ಮಳೆ ಸುರಿಸಿದೆ. ಕೇರಳದ ಕೆಲವೆಡೆ ಜನ ಬದುಕು ಅಸ್ತವ್ಯಸ್ತ ಮಾಡುವಂತೆ ಮಳೆ ಬಂದಿದೆ, ಬರುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.