ಕಾರ್ಕಳ: ಅಕ್ಟೋಬರ್ 03 ಶುಕ್ರವಾರದಂದು ನಮ್ಮನ್ನು ಅಗಲಿದ ಕಾರ್ಕಳ ಬಿಜೆಪಿಯ ಹಿರಿಯ ಮುಖಂಡರು, ಖ್ಯಾತ ನ್ಯಾಯವಾದಿಗಳಾದ ಎಂ ಕೆ ವಿಜಯ್ ಕುಮಾರ್ ರವರು ಕಾರ್ಕಳ ಬಿಜೆಪಿಗೆ, ಸಮಾಜಕ್ಕೆ ನೀಡಿದ ಕೊಡುಗೆ ಅಪಾರ.

ಶ್ರೀಯುತರ ಆತ್ಮಕ್ಕೆ ಸದ್ಗತಿ ಕೋರಿ ಕಾರ್ಕಳ ಬಿಜೆಪಿ ಮಂಡಲದ ವತಿಯಿಂದ ಬಿ ಮಂಜುನಾಥ ಪೈ ಸಭಾಂಗಣದಲ್ಲಿ ಅಕ್ಟೋಬರ್ 25 ರಂದು ಬೆಳಿಗ್ಗೆ 10.00 ಗಂಟೆಗೆ ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಉಡುಪಿ ದಕಿಣ ಕನ್ನಡ ಜಿಲ್ಲೆಯ ಬಿಜೆಪಿ ಹಿರಿಯರು, ಶಾಸಕರು, ಪ್ರಮುಖರು ಭಾಗವಹಿಸಲಿದ್ದಾರೆ.