ಪುತ್ತೂರು:  ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘ ಹಾಗೂ ಪ್ಲೇಸ್‌ಮೆಂಟ್‌ ಸೆಲ್‌ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಮ್‌ ಜೀ ಪ್ರತಿಷ್ಠಾನದ ವತಿಯಂದ ಅಸೋಸಿಯೇಟ್‌ ಲೀಡರ್‌ ಹುದ್ದೆಗಳಿಗಾಗಿ ಕ್ಯಾಂಪಸ್‌ ನೇಮಕಾತಿ ಅಭಿಯಾನವನ್ನು ಆಯೋಜಿಸಲಾಯಿತು. ಅಜೀಂ ಪ್ರೇಮ್‌ ಜೀ ಪ್ರತಿಷ್ಠಾನದ ಮಾನವ ಸಂಪನ್ಮೂಲ ವಿಭಾಗದ ಮ್ಯಾನೇಜರ್‌ ಗೋಪಾಲಕೃಷ್ಣ ಐ ರವರು ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಕಲಿಕೆಯ ಮಹತ್ವ ಹಾಗೂ ಅಸೋಸಿಯೇಟ್‌ ಲೀಡರ್‌ ಹುದ್ದೆಯಲ್ಲಿ ನಿರ್ವಹಿಸಬೇಕಾದ ಜವಾಬ್ದಾರಿಗಳನ್ನು ತಿಳಿಸಿದರು. ಅರ್ಹ ಅಭ್ಯರ್ಥಿಗಳ ಆಯ್ಕೆಗಾಗಿ ಲಿಖಿತ ಪರೀಕ್ಷೆಯನ್ನು ನಡೆಸಲಾಯಿತು.

ಕಾಲೇಜಿನ ಸ್ನಾತಕೋತ್ತರ ವಿಭಾಗದ 39 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಿದರು. ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರತಿಭಾ ಕೆ ಸ್ವಾಗತಿಸಿದರು. ಕಾಲೇಜಿನ ಪದವಿ ವಿಭಾಗದ ಪ್ಲೇಸ್‌ಮೆಂಟ್‌ ಅಧಿಕಾರಿ ಯಶವಂತ ಕೆ ವಂದಿಸಿದರು.