ಉಡುಪಿ ಎಪ್ರಿಲ್ 10: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ಉಲ್ಬಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಪರಾಮರ್ಶಿಸಿ ಕರೋನ ಕರ್ಫ್ಯೂ  ವಿಧಿಸುವುದು ಸಾರ್ವಜನಿಕ ಹಿತದೃಷ್ಟಿಯಿಂದ ಅತಿ ಅವಶ್ಯಕವೆoದು ಕoಡು ಬoದಿದ್ದು, ಅದರoತೆಏ. 10 ರಿಂದ 20 ರ ವರೆಗೆ ರಾತ್ರಿ 10 ಗಂಟೆಯಿoದ ಬೆಳಗ್ಗೆ 5ಗಂಟೆಯವರೆಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ (ಮಣಿಪಾಲ ಸೇರಿದಂತೆ) ಅನ್ವಯವಾಗುವಂತೆ ಮುಂದಿನ ಆದೇಶದವರೆಗೆ ಈ ಕೆಳಕಂಡ ಅತ್ಯವಶ್ಯಕ ಸೇವೆಗಳಿಗೆ ಮಾತ್ರ ಅನುಮತಿಸಿ, ಉಳಿದಂತೆ ಎಲ್ಲಾ ಸೇವೆಗಳನ್ನು /ಸಂಚಾರಗಳನ್ನು ನಿಷೇಧಿಸಿ ಈ ಕೆಳಕಂಡoತೆ ಜಿಲ್ಲಾಧಿಕಾರಿ ಜಿ. ಜಗದೀಶ್ ‌ಆದೇಶ ಹೊರಡಿಸಿರುತ್ತಾರೆ.