ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡಯವರ 54ನೇ ವರ್ಷದ ಪಟ್ಟಾಭಿಷೇಕ ವರ್ಧಂತಿಆಚರಣೆ ನಾಳೆ ಭಾನುವಾರ ಸರಳವಾಗಿ ನಡೆಯಲಿದೆ.

ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥ ಸ್ವಾಮಿದೇವಸ್ಥಾನದಲ್ಲಿ ಭಾನುವಾರ ಬೆಳಿಗ್ಯೆ ವಿಶೇಷ ಪೂಜೆ ನಡೆಯುತ್ತದೆ.

ಧರ್ಮಸ್ಥಳದಲ್ಲಿ ಎಲ್ಲೆಲ್ಲೂ ಸಂಭ್ರಮ, ಸಡಗರ ಹಾಗೂ ದೇವಸ್ಥಾನ ಮತ್ತು ಬೀಡನ್ನು (ಹೆಗ್ಗಡೆಯವರ ನಿವಾಸ) ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ದೇವಳದ ನೌಕರ ವೃಂದ, ಊರಿನ ನಾಗರಿಕರು, ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ನೌಕರರು ಮತ್ತು ವಿದ್ಯಾರ್ಥಿಗಳು, ಊರ-ಪರವೂರ ಭಕ್ತರು, ಅಭಿಮಾನಿಗಳು ಬಂದು ಹೆಗ್ಗಡೆಯವರನ್ನು ಶ್ರದ್ಧಾ-ಭಕ್ತಿಯಿಂದ ಅಭಿನಂದಿಸಿ, ಗೌರವಿಸುತ್ತಾರೆ.

ಮಹೋತ್ಸವ ಸಭಾ ಭವನದಲ್ಲಿ ಸಂಜೆ 5 ಗಂಟೆಗೆ ನಡೆಯುವ ಸಮಾರಂಭದಲ್ಲಿತುಮಕೂರಿನ ನಿವೃತ್ತಜಿಲ್ಲಾಧಿಕಾರಿ ಸಿ.ಸೋಮಶೇಖರ್‍ಅಭಿನಂದನಾ ಭಾಷಣ ಮಾಡುವರು.

ಬಳಿಕ ಹೆಗ್ಗಡೆಯವರು ಮುಂದಿನ ವರ್ಷದ ಹೊಸ ಯೋಜನೆಗಳನ್ನು ಪ್ರಕಟಿಸುವರು.

ಹಿರಿಯ ನೌಕರರಾದ ಶುಭಚಂದ್ರರಾಜ ಮತ್ತುತೋಟಗಾರಿಕಾ ವಿಭಾಗದ ಮುಖ್ಯಸ್ಥ ಬಾಲಕೃಷ್ಣ ಪೂಜಾರಿಅವರನ್ನು ಹೆಗ್ಗಡೆಯವರು ಸನ್ಮಾನಿಸುವರು.

ಅಪೂರ್ವ ಸಾಧನೆಗಳ ಸರದಾರ: 1968ರ ಅಕ್ಟೋಬರ್ 24 ರಂದು ನೆಲ್ಯಾಡಿ ಬೀಡಿನಲ್ಲಿ ಸಂಪ್ರದಾಯದಂತೆ ಧರ್ಮಸ್ಥಳದ 21ನೆ ಧರ್ಮಾಧಿಕಾರಿಯಾಗಿತನ್ನಇಪ್ಪತ್ತನೆ ವರ್ಷ ಪ್ರಾಯದಲ್ಲಿ ಪಟ್ಟಾಭಿಷಿಕ್ತರಾದ ಅಂದಿನ ವೀರೇಂದ್ರಕುಮಾರ್ ಧರ್ಮಸ್ಥಳವನ್ನು ಜಾಗತಿಕ ಮಟ್ಟದಲ್ಲಿಗುರುತಿಸುವಂತೆ ಮಾಡಿದ್ದಾರೆ. ತಮ್ಮ ವಿನೂತನ ಯೋಜನೆಗಳ ಮೂಲಕ

ಕಾರ್ಕಳದಿಂದ ಧರ್ಮಸ್ಥಳಕ್ಕೆ ಭಗವಾನ್ ಬಾಹುಬಲಿ ಮೂರ್ತಿಯ ಸಾಗಾಣಿಕೆ ಹಾಗೂ ರತ್ನಗಿರಿಯಲ್ಲಿ 1982 ರಲ್ಲಿ ಮೂರ್ತಿಯ ಪ್ರತಿಷ್ಠಾಪನೆ ಹಾಗೂ ಪ್ರಥಮ ಮಹಾಮಸ್ತಕಾಭಿಷೇಕ, ಇದರ ಸವಿ ನೆನಪಿಗಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ ಹಾಗೂ ನಿರುದ್ಯೋಗ ಸಮಸ್ಯೆ ನಿವಾರಣೆಗಾಗಿಉಜಿರೆಯಲ್ಲಿಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗತರಬೇತಿಕೇಂದ್ರದ ಪ್ರಾರಂಭ.

ಪ್ರಾಚೀನ ದೇಗುಲಗಳು ಹಾಗೂ ಐತಿಹಾಸಿಕ ಸ್ಮಾರಕಗಳ ಜೀರ್ಣೋದ್ಧಾರ ಮತ್ತು ಸಂರಕ್ಷಣೆಗಾಗಿಎಸ್.ಡಿ.ಎಂ.ಧರ್ಮೋತ್ಥಾನಟ್ರಸ್ಟ್, ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಅನುಷ್ಠಾನ, ಪ್ರತಿವರ್ಷರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ, ಉಜಿರೆ, ಧಾರವಾಡ, ಮೈಸೂರು, ಮಂಗಳೂರು ಮತ್ತು ಬೆಂಗಳೂರಿನಲ್ಲಿಕೆ.ಜಿ. ಯಿಂದ ಪಿ.ಜಿ. ವರೆಗಿನ ಶಿಕ್ಷಣ ಸಂಸ್ಥೆಗಳು, ಆಯುರ್ವೇದ ಮತ್ತು ಪಾರಂಪರಿಕ ಪ್ರಕೃತಿಚಿಕಿತ್ಸಾ ಪದ್ಧತಿಗೆಕಾಯಕಲ್ಪ, ಮದುವೆಗಾಗಿದುಂದುವೆಚ್ಚ ಹಾಗೂ ವರದಕ್ಷಿಣೆತಡೆಯಲು ಪ್ರತಿವರ್ಷ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ, ಭಜನಾತರಬೇತಿಕಮ್ಮಟ, ವರ್ಷದಲ್ಲಿಎರಡು ಬಾರಿ (ಅಗೋಸ್ತು 15 ಮತ್ತುಜನವರಿ 14) ಎಲ್ಲಾಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾಅಭಿಯಾನ- ಇವು ಹೆಗ್ಗಡೆಯವರಚಿಂತನ– ಮಂಥನದಿಂದ ಯಶಸ್ವಿಯಾಗಿ ಅನುಷ್ಠಾನಗೊಂಡ ಲೋಕಕಲ್ಯಾಣಕ್ಕಾಗಿ ಸೇವಾ ಕಾರ್ಯಗಳು. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವೇ ಕೆಲವು ಯೋಜನೆಗಳಿಗೆ ಮಾನ್ಯತೆ ನೀಡಿ ಅನುಷ್ಠಾನಗೊಳಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರೆ ಹೆಗ್ಗಡೆಯವರ ಸೇವಾ ಕಾರ್ಯಗಳು ಹಾಗೂ ಸರಳ ವ್ಯಕ್ತಿತ್ವವನ್ನು ಶ್ಲಾಘಿಸಿ ಅಭಿನಂದಸಿದ್ದಾರೆ.