ಬೆಳ್ತಂಗಡಿ : ನವೆಂಬರ್ 20: ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಂತೆ ಧರ್ಮಸ್ಥಳದಲ್ಲಿರುವ ಎಸ್.ಡಿ.ಎಂ. ಕನ್ನಡ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿ ಸಾಂಪ್ರದಾಯಿಕ ಕಲಾತ್ಮಕ ಗಂಜೀಫಾ ಆಟದ ಎಲೆಗಳನ್ನು ರಚಿಸಿ ತಮ್ಮ ಸೃಜನಶೀಲತೆ ವ್ಯಕ್ತಪಡಿಸಿದರು. 

ವಿದ್ಯಾರ್ಥಿಗಳು ಮಂಜೂಷಾ ವಸ್ತು ಸಂಗ್ರಹಾಲಯಕ್ಕೆ ಭೇಟಿ ನೀಡಿದರು. ವಸ್ತು ಸಂಗ್ರಹಾಲಯದ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಹಿಂದಿನ ಕಾಲದಲ್ಲಿ ಬಳಸುತ್ತಿದ್ದ ಕಲಾತ್ಮಕ ಗಂಜೀಫಾ ಆಟದ ಎಲೆಗಳ ತಯಾರಿ ಹಾಗೂ ಬಣ್ಣಗಾರಿಕೆ ಕುರಿತು ಮಾಹಿತಿ ನೀಡಿದರು.

ಗಂಜೀಪಾ ಕಾರ್ಡ್‍ಗಳನ್ನು ತಯಾರಿಸಲು ಬೇಕಾದ ವಸ್ತುಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಯಿತು. ಸೃಜನ ಶೀಲತೆಯೊಂದಿಗೆ ವಿದ್ಯಾರ್ಥಿಗಳು ವಿವಿಧ ವಿನ್ಯಾಸದ ಕಲಾತ್ಮಕ ಗಂಜೀಫಾ ಕಾರ್ಡ್‍ಗಳನ್ನು ಬಣ್ಣದೊಂದಿಗೆ ರಚಿಸಿದರು. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.