ಉಡುಪಿ: ಉಡುಪಿ ಬಳಕೆದಾರರ ವೇದಿಕೆಯ ವಿಶ್ವಸ್ಥರಾಗಿದ್ದ ನಿವೃತ್ತ ಶಿಕ್ಷಕ, ಶಿಕ್ಷಣಾಧಿಕಾರಿ, ಪತ್ರಕರ್ತ ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದ ಕೆ. ದಾಮೋದರ ಐತಾಳ (86 ವರ್ಷ) ಇಂದು 08-12-2020ರಂದು ಮುಂಜಾನೆ 2 ಗಂಟೆಗೆ ಕಡಿಯಾಳಿಯ ಸ್ವಗೃಹದಲ್ಲಿ ನಿಧನರಾದರು. ಇವರಿಗೆ 5 ವರ್ಷಗಳ ಹಿಂದೆ ಯಕ್ಷಗಾನ ಕಲಾರಂಗದ ಕೋಶಾಧಿಕಾರಿಯಾಗಿದ್ದ ಎಸ್. ಗೋಪಾಲಕೃಷ್ಣ ಇವರ ನೆನಪಿನಲ್ಲಿ ಸಾಮಾಜಿಕ ಕಾರ್ಯಕರ್ತರಿಗೆ ನೀಡುವ ‘ಸೇವಾ ಭೂಷಣ’ ಪ್ರಸಸ್ತಿಯನ್ನು ನೀಡಿ ಗೌರವಿಸಿದ್ದನ್ನು ಸ್ಮರಿಸಿಕೊಳ್ಳಬಹುದು. ಐತಾಳರ ನಿಧನದಿಂದ ಉಡುಪಿ ಓರ್ವ ಸಜ್ಜನ ಹಿರಿಯ ಸಾಮಾಜಿಕ ಕಾರ್ಯಕರ್ತನನ್ನು ಕಳೆದು ಕೊಂಡಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವಗಾಹನೆಗೆ : ಇಂದು (09-12-2020) ಉಡುಪಿ ಪೇಜಾವರ ಮಠದ ಶ್ರೀ ರಾಮವಿಠಲ ಸಭಾಭವನದಲ್ಲಿ ನಮ್ಮನ್ನಗಲಿದ ಹಿರಿಯ ಸಾಧಕ ಶ್ರೇಷ್ಠರಾದ ಪ್ರೊ. ಉದ್ಯಾವರ ಮಾಧವ ಆಚಾರ್ಯ ಹಾಗೂ ಕೆ. ದಾಮೋದರ ಐತಾಳರಿಗೆ ಶ್ರದ್ಧಾಂಜಲಿ ಪೂರ್ವಕ ನುಡಿನಮನ ಕಾರ್ಯಕ್ರಮ ಸಂಜೆ 5 ಗಂಟೆಯಿಂದ 7 ಗಂಟೆಯವರೆಗೆ ನಡೆಯಲಿದೆ.