ವರದಿ ರಾಯಿ ರಾಜಕುಮಾರ ಮೂಡುಬಿದಿರೆ 


ಕಿನ್ನಿಗೋಳಿ:  ಕಿನ್ನಿಗೋಳಿಯ ಬಸ್ಸು ನಿಲ್ದಾಣದ ಪ್ರದೇಶದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ನಿರ್ಮಾಣಗೊಂಡ ಸಾರ್ವಜನಿಕ ಶೌಚಾಲಯವನ್ನು ಜುಲೈ ಹತ್ತರಂದು ಉದ್ಘಾಟಿಸಲಾಯಿತು. ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟನೆಯನ್ನು ನೆರವೇದಿಸಿ ಸಾರ್ವಜನಿಕರಿಗೆ ಉಪಯೋಗವಾಗುವಂತೆ ಈ ಸೌಲಭ್ಯವನ್ನು ಸ್ವಚ್ಛ ಹಾಗೂ ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳುವ ಅಗತ್ಯವಿದೆ ಎಂದರು. 

ಅದೇ ರೀತಿ ಕಿನ್ನಿಗೋಳಿ ಪಟ್ಟಣ ಪಂಚಾಯತ್ ನಲ್ಲಿ ಗ್ರಾಮಲೆಕ್ಕಿಗರಿಗೆ ಅನುಕೂಲವಾಗುವುದಕ್ಕೆ ಲ್ಯಾಪ್ಟಾಪ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರಕಾರ ನೀಡಿರುವ ಸೌಲಭ್ಯವನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡು ಸರಕಾರದ ಕಾರ್ಯಗಳಿಗೆ ಹೆಚ್ಚಿನ ಸಹಕಾರವನ್ನು ನೀಡಬೇಕೆಂದು ವಿನಂತಿಸಿದರು. ತಹಸಿಲ್ದಾರ ಶ್ರೀಧರ್, ಪಟ್ಟಣ ಪಂಚಾಯತ್ ಅಧಿಕಾರಿಗಳು, ಸದಸ್ಯರು, ಸ್ಥಳೀಯ ಮುಖಂಡರುಗಳು ಹಾಜರಿದ್ದರು.