ಕಿನ್ನಿಗೋಳಿ: ವಿಶ್ವ ಆಹಾರದ ದಿನಾಚರಣೆಯ ಪ್ರಯುಕ್ತ ಆಹಾರ ಪೂರೈಸುವ ರೈತನ ಪ್ರಾಮುಖ್ಯತೆಯನ್ನು ತಿಳಿಸುವುದರ ಜೊತೆಗೆ ದೇಶದ ಬೆನ್ನೆಲುಬಾಗಿರುವ ಸಾಧಕ ಪ್ರಗತಿಪರ ರೈತರನ್ನು ಗುರುತಿಸಿ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎಂದ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಹೇಳಿದರು.

ಅವರು ಪುನರೂರು ಪ್ರತಿಷ್ಠಾನ ಆಶ್ರಯದಲ್ಲಿ ಜನವಿಕಾಸ ಸಮಿತಿ ಸಹಕಾರದಲ್ಲಿ ವಿಶ್ವ ಆಹಾರ ದಿನಾಚರಣೆ ಆಹಾರ ಜಾಗೃತಿ ಅಭಿಯಾನ 2023  ಕಿನ್ನಿಗೋಳಿ ಸಮೀಪದ  ಬಳ್ಕುಂಜೆ ತೋಟ ಹೌಸ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಪ್ರತಿಷ್ಠಾನದ ಗೌರವಾಧ್ಯಕ್ಷ  ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ  ಆಹಾರದ ಅಪವ್ಯಯವನ್ನು ತಡೆಗಟ್ಟಲು ಆಹಾರ ಜಾಗೃತಿ ಕಾರ್ಯಕ್ರಮ ನಿರಂತರವಾಗಿ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಕ್ಷೇತ್ರದ ಸಾಧಕ ಎಲಿಯಾಸ್ ಡಿಸೋಜಾ ಬಳ್ಕುಂಜೆ ರವರನ್ನು ಕೃಷಿ ರತ್ನ 2023 ಪ್ರಶಸ್ತಿ ನೀಡಿ ಪತ್ನಿ ಸಮೇತ ಗೌರವಿಸಲಾಯಿತು. 

ಪುತ್ತೂರು ದೇoದಡ್ಕ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ಅರ್ಚಕ ಸುಬ್ರಹ್ಮಣ್ಯ ಭಟ್,ಬಳ್ಕುಂಜೆ ಭಜನಾ ಮಂದಿರದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಉದ್ಯಮಿ ಸತೀಶ ರಾಮ ಪೂಜಾರಿ, ಪ್ರತಿಷ್ಠಾನದ ಅಧ್ಯಕ್ಷ ದೇವ ಪ್ರಸಾದ್, ಪ್ರಧಾನ ಕಾರ್ಯದರ್ಶಿ ಶ್ರೇಯ, ಜನವಿಕಾಸ ಸಮಿತಿಯ ಅಧ್ಯಕ್ಷೆ ಶೋಭಾರಾವ್, ಜಿತೇಂದ್ರ ವಿ ರಾವ್, ಪ್ರಾಣೇಶ್ ಭಟ್, ಶಶಿಕರ, ದಾಮೋದರ್ ಶೆಟ್ಟಿ ಕೊಡೆತ್ತೂರು ಮತ್ತಿತರರು ಉಪಸ್ಥಿತರಿದ್ದರು.