ಮಂಗಳೂರು; ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ. 21ರ ವರೆಗೆ ಮೊಕ್ಕಾಂ ಹೂಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ 10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ ತಲುಪುವ ಉದ್ದೇಶ ಹೊಂದಲಾಗಿದೆ.
ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.