ಮಂಗಳೂರು; ಶ್ರೀ ಸಂಸ್ಥಾನ ಗೋಕರ್ಣ  ಪರ್ತಗಾಳಿ ಜೀವೋತ್ತಮ ಮಠ, ಗೋವಾದ ಪರಮಪೂಜ್ಯ ಶ್ರೀಮತ್ ವಿದ್ಯಾಧೀಶ ತೀರ್ಥ ಶ್ರೀ ಪಾದ ಒಡೇರಾ ಸ್ವಾಮೀಜಿಯವರು ಮಂಗಳೂರು ರಥಬೀದಿ ಶ್ರೀ ಗೋಕರ್ಣ ಮಠದ ಶಾಖಾ ಮಠದಲ್ಲಿ ನ.3 ರಿಂದ ನ. 21ರ ವರೆಗೆ ಮೊಕ್ಕಾಂ ಹೂಡಲಿದ್ದಾರೆ. 

ಈ ಹಿನ್ನೆಲೆಯಲ್ಲಿ ನ.17ರಂದು ಒಂದೇ ದಿನದಲ್ಲಿ 55ಲಕ್ಷ ಜಪ  ಸಂಖ್ಯೆಯ ಗುರಿ ಹೊಂದಿರುವ ಶ್ರೀ ರಾಮನಾಮ ಜಪ ಮಹಾ ಅಭಿಯಾನ  ಮಂಗಲರಾಮಃ ಕೇಂದ್ರದಲ್ಲಿ ನಡೆಯಲಿದೆ. ಎಪ್ರಿಲ್ 17 ರಂದು ಆರಂಭಿಸಲಾದ ಶ್ರೀ ರಾಮನಾಮ ಜಪ ಅಭಿಯಾನದಲ್ಲಿ , ಮಂಗಲರಾಮಃ ಕೇಂದ್ರದಲ್ಲಿ ಈಗಾಗಲೇ 10.50 ಕೋಟಿ ಶ್ರೀ ರಾಮನಾಮ ಜಪ ನಡೆದಿದೆ. ನ 18,2025 ರೊಳಗೆ 25ಕೋಟಿ ಶ್ರೀ ರಾಮನಾಮ ಜಪ  ತಲುಪುವ ಉದ್ದೇಶ ಹೊಂದಲಾಗಿದೆ.

ಪರಮಪೂಜ್ಯ ಶ್ರೀ ಸ್ವಾಮೀಜಿಯವರು ಎರಡನೇ ಬಾರಿಯ ಈ ಐತಿಹಾಸಿಕ ಮೊಕ್ಕಾಂ ನ ಸಂದರ್ಭದಲ್ಲಿ  ಸಮಾಜದ ಭಕ್ತ ಬಾಂಧವರು ಆಗಮಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು  ಯಶಸ್ವಿಯಾಗಿ ನಡೆಸಿ ಶ್ರೀರಾಮ ವೀರ ವಿಠಲ ದೇವರ ಕೃಪೆಗೆ ಪಾತ್ರರಾಗ ಬೇಕಾಗಿ ಹಾಗೂ ಪರಮಪೂಜ್ಯ ಶ್ರೀ ಸ್ವಾಮೀಜಿಗಳ ಆಶೀರ್ವಾದ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಪ್ರಕಟಣೆ ತಿಳಿಸಿದೆ.