ಮಂಗಳೂರು:  ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿರುವರೇ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಸಂಸ್ಥಾಪಕರಾದ ಡಾ. ಕೆ.ಸಿ.ನಾೈಕ್‍ರವರು ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಕರ್ನಾಟಕ, ರುಪ್ಸ ಕರ್ನಾಟಕ ವತಿಯಿಂದ ಶಿಕ್ಷಣ ಭೀಷ್ಮ ಪ್ರಶಸ್ತಿ ಪಡೆದುಕೊಂಡಿರುವುದಕ್ಕಾಗಿ ಶಕ್ತಿ ವಿದ್ಯಾ ಸಂಸ್ಥೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಂದ ಸನ್ಮಾನ ಸಮಾರಂಭವನ್ನು ಆಯೋಜಿಸಲಾಯಿತು.

ಈ ಸಮಾರಂಭದಲ್ಲಿ ಶಿಕ್ಷಣ ತಜ್ಞರು ಮತ್ತು ಯುನೈಟೆಡ್‍ Nation Devolopment Project ಮತ್ತು ಸಂಪನ್ಮೂಲ ವ್ಯಕ್ತಿಗಳು ಆಗಿರುವ ಡಾ.ಎನ್ ಸಂತೋಷ್ ಕುಮಾರ್‍ ಅವರು ಭಾಗವಹಿಸಿ ಶಕ್ತಿ ವಿದ್ಯಾ ಸಂಸ್ಥೆಯೊಂದು ಮಾದರಿ ವಿದ್ಯಾ ಸಂಸ್ಥೆಯಾಗಿದೆ. ಇಲ್ಲಿ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಬೇಕಾದ ಸಕಲ ಸೌಲಭ್ಯವು ಇದೆ. ಭಾರತೀಯ ಸಂಸ್ಕಾರದೊಂದಿಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದೆ. ಇಂತಹ ಸಂಸ್ಥೆಯನ್ನು ಕಟ್ಟಿದ ಡಾ. ಕೆ.ಸಿ. ನಾೈಕ್‍ರವರು ನಮಗೆಲ್ಲ ಸ್ಫೂರ್ತಿ ನೀಡುವ ಒಬ್ಬ ಜೀವಂತದಂತ ಕತೆಯಾಗಿದ್ದಾರೆ. ತಮ್ಮಜೀವನದುದ್ದಕ್ಕೂ ಸಮಾಜಕ್ಕೆಉತ್ತಮ ನಾಗರಿಕರನ್ನು ನೀಡುವ ನಿಟ್ಟಿನಲ್ಲಿ ಸಮಾಜ ಸೇವೆಯನ್ನು ಮಾಡುತ್ತಲೆ ಬಂದಿರುವ ಶ್ರೀಯುತರಿಂದ ನಾವು ಕಲಿಯುವುದು ಬಹಳಷ್ಟಿದೆ ಎಂದು ಹೇಳಿದರು.

ನಂತರ ಸನ್ಮಾನ ಸ್ವೀಕರಿಸಿದ ಡಾ. ಕೆ.ಸಿ.ನಾೈಕ್‍ ಅವರು ಮಾತನಾಡಿ ಈ ಪ್ರಶಸ್ತಿ ಬರಲು ನಾನೊಬ್ಬ ಕಾರಣನಲ್ಲ ಇದು ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿಯೊಬ್ಬರಿಂದಲೂ ಈ ಸಾಧನೆ ಮಾಡಲು ಸಾಧ್ಯವಾಗಿದೆ.  ಈ ಶಾಲೆಯಲ್ಲಿ ಸಿಗುವ ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣದಿಂದ ಮಕ್ಕಳು ಬೆಳವಣಿಗೆ ಹೊಂದಿ ದೇಶಕ್ಕೆ ಸಂಪತ್ತಾಗಬೇಕು. ಮಕ್ಕಳಿಗೆ ಯಾವುದೇ ರೀತಿಯಲ್ಲೂ ಕೊರತೆ ಬಾರದಂತೆ ಸಕಲ ಸೌಲಭ್ಯವನ್ನು ಒದಗಿಸುವತ್ತಸ ದಾ ನಾನು ಯೋಚಿಸುತ್ತಿರುತ್ತೇನೆ ಮತ್ತು ನನ್ನ ಸಾಧನೆಯಲ್ಲಿ ನನಗೆ ಸಹಕರಿಸಿದ ಎಲ್ಲರಿಗೂ ನಾನು ವಂದನೆಗಳನ್ನು ಸಲ್ಲಿಸುತ್ತೇನೆ ಎಂದು ಮಾತನಾಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ ಅವರು ಮಾತನಾಡಿಡಾ. ಕೆ.ಸಿ. ನಾೈಕ್‍ ರವರು ನಡೆದು ಬಂದಹಾದಿ ಮತ್ತು ಶಕ್ತಿ ವಿದ್ಯಾ ಸಂಸ್ಥೆಯ ಆರಂಭದಿಂದ ಇಲ್ಲಿಯ ವರೆಗಿನ ಪ್ರಗತಿಯನ್ನು ಕುರಿತು ತಮ್ಮ ಪ್ರಾಸ್ಥಾವಿಕ ನುಡಿಗಳಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ ಅವರು ಸನ್ಮಾನ ಪತ್ರವನ್ನು ವಾಚಿಸಿದರು.

ಈ ಸಮಯದಲ್ಲಿ ಡಾ. ಕೆ.ಸಿ.ನಾೈಕ್‍ ಅವರು ಜೀವನದುದ್ದಕ್ಕೂ ಮಾಡಿದ ಕಾರ್ಯ ಸಾಧನೆ ಮತ್ತು ಅವರು ಬೆಳೆದು ಬಂದ ಹಾದಿಯ ಕುರಿತು ಒಂದು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು.

ಈ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ.ಸಿ. ನಾೈಕ್ ಸಂಸ್ಥೆಯ ಪ್ರಧಾನ ಸಲಹೆಗಾರರಾದ ರಮೇಶ್ ಕೆ, ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಮೂರ್ತಿ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ  ಬಬಿತಾ ಸೂರಜ್ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಶಿಕ್ಷಕ ಶರಣಪ್ಪ ಸಮಾರಂಭವನ್ನು ನಿರೂಪಿಸಿ ವಂದಿಸಿದರು.