ಮಂಗಳೂರು ಜೂ28:  ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ದಿನಾಂಕ: 29.06.2024 ರಂದು ಬೆಳಗ್ಗೆ 09:30 ಗಂಟೆಗೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಉತ್ತರವಲಯ ಶಾಸಕರಾದ ಡಾ. ಭರತ್ ಶೆಟ್ಟಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್‍ ಟ್ರಸ್ಟ್ ನ ಆಡಳಿತಾಧಿಕಾರಿಯಾದ ಡಾ. ಕೆ.ಸಿ ನಾೈಕ್‍ ವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪ್ರಧಾನ ಸಲಹೆಗಾರ ರಮೇಶ ಕೆ, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲರಾದ ಬಬಿತ ಸೂರಜ್ ಹಾಗೂ ಶಕ್ತಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಹೆಚ್ ಉಪಸ್ಥಿತರಿರುತ್ತಾರೆ.