ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169 (13) ಸಾಣೂರು-ಬಿಕರ್ನಕಟ್ಟೆ ವಿಭಾಗದ ರಸ್ತೆ ಅಗಲೀಕರಣಕ್ಕಾಗಿ ಭೂಸ್ವಾಧೀನ ಪಡಿಸಲಾದ ಜಮೀನಿನ ಮಾಲಿಕರಿಗೆ ಪರಿಹಾರ ಪಾವತಿ ಹಾಗೂ ಕ್ಲೈಮ್ಗಳನ್ನು ಪಡೆಯುವ ಅದಾಲತ್ ಕಾರ್ಯಕ್ರಮವನ್ನು ಫೆಬ್ರವರಿ 6 ರಂದು ಬೆಳಿಗ್ಗೆ 10.30 ಗಂಟೆಗೆ ಗುರುಪುರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಬಡಗ ಉಳಿಪಾಡಿ, ತೆಂಕ ಉಳಿಪಾಡಿ ಮೂಳೂರು, ಮೂಡುಪೆರಾರ ಗ್ರಾಮಗಳ ಭೂಸ್ವಾಧೀನಕ್ಕೆ ಒಳಪಟ್ಟ ಜಮೀನಿನ ಮಾಲಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಿ ಪರಿಹಾರ ಮೊತ್ತವನ್ನು ಪಡೆಯಬೇಕು.
ಅದಾಲತ್ ಕಾರ್ಯಕ್ರಮದಲ್ಲಿ ಪರಿಹಾರ ಪಡೆಯಲು ಕ್ಲೈಮ್ ಸಲ್ಲಿಸದ ಭೂ ಮಾಲಿಕರು ಅವಾರ್ಡು ನೋಟೀಸಿನಲ್ಲಿ ತಿಳಿಸಿರುವ ದಾಖಲೆಗಳೊಂದಿಗೆ ಹಾಜರಾಗಿ ಕ್ಲೈಮ್ ಸಲ್ಲಿಸುವಂತೆ ಹಾಗೂ ಈಗಾಗಲೇಕ್ಲೈಮ್ ಸಲ್ಲಿಸಿದ ಭೂ ಮಾಲಿಕರು ಪರಿಹಾರ ಪಡೆಯಲು ಹಾಜರಾಗಿ ಅಗತ್ಯ ದಾಖಲೆಗಳಿಗೆ ಸಹಿಮಾಡಬೇಕು.ಈ ಅದಾಲತ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭೂ ಸಂತ್ರಸ್ಥರು ಭಾಗವಹಿಸಿಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ವಿಶೇಷ ಭೂಸ್ವಾಧೀನಾಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರಿ ಮೊಹಮ್ಮದ್ ಇಸಾಕ್ ಕೆ.ಎ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.