ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಡಿಸೆಂಬರ್ 3 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ,  8-  ನೆಹರು ಮೈದಾನದಲ್ಲಿ ಫುಟ್‍ಬಾಲ್ ಕ್ರೀಡಾಂಗಣಕ್ಕೆ ಆ್ಯಸ್ಟ್ರೋ ಟರ್ಫ್ (astro turf) ಹಾಗೂ ಸುತ್ತಲೂ ಇಂಟರ್‍ಲಾಕ್ ಅಳವಡಿಕೆ ಕಾಮಗಾರಿ ಉದ್ಘಾಟನೆ,  8:30 - ಮಹಾಕಾಳಿ ಪಡ್ಪು ರೈಲ್ವೆ ಕೆಳ ಸೇತುವೆ ಹಾಗೂ ಸಂಪರ್ಕ ರಸ್ತೆಯ ಸ್ಥಳ ವೀಕ್ಷಣೆ,  11-  ಮಂಗಳೂರು ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಗಳನ್ನು ಬರಮಾಡಿಕೊಳ್ಳುವುದು, 11:40- ಕೊಣಾಜೆ ಮಂಗಳಗಂಗೋತ್ರಿಯಲ್ಲಿ ಶಿವಗಿರಿ ಮಠ ವರ್ಕಲಾ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಆಯೋಜಿಸಿರುವ ಶತಮಾನದ ಪ್ರಸ್ತಾನ  ಶ್ರೀ ನಾರಾಯಣ ಗುರು-  ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ,   ಶ್ರೀ ಗುರುವಿನ ಮಹಾ ಸಮಾಧಿ  ಶತಾಬ್ದಿ,  ಸರ್ವಮತ ಸಮ್ಮೇಳನ ಶತಮಾನೋತ್ಸವ,  ಯತಿ ಪೂಜೆ ಉದ್ಘಾಟನಾ ಸಮಾರಂಭ, ಮಧ್ಯಾಹ್ನ12:30– ಮುಖ್ಯಮಂತ್ರಿಗಳೊಂದಿಗೆ  ದೇರಳಕಟ್ಟೆಯಲ್ಲಿ ಕಣಚೂರು ಇಸ್ಲಾಮಿಕ್ ಎಜುಕೇಶನ್ ಟ್ರಸ್ಟ್ ಇವರ ವತಿಯಿಂದ ಆಯೋಜಿಸಿರುವ ಕಣಚೂರು ಕ್ಲಾಕ್ ಟವರ್ ವೃತ್ತ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 1-ಮುಖ್ಯಮಂತ್ರಿಗಳೊಂದಿಗೆ  ಪೇಸ್, ಜ್ಞಾನ ನಗರ,  ಕೊಣಾಜೆ ವತಿಯಿಂದ ಆಯೋಜಿಸಿರುವ  ಪೇಸ್ ಮತ್ತು ಎ.ಐ ಉನ್ನತ ಅಧ್ಯಯನ ಕೇಂದ್ರದ ಶಿಲಾನ್ಯಾಸ, ಪೇಸ್ ಟ್ರೈಡ್ ಪಾರ್ಕ್ ಮತ್ತು ಪೇಸ್ ಸ್ಪೋಟ್ರ್ಸ್ ಅರೆನಾ ಇದರ ಶಿಲಾನ್ಯಾಸ  ಹಾಗೂ ಪೇಸ್‍ಕೇರ್ಸ್ ಸಮುದಾಯ ಸೇವಾ ಯೋಜನೆಗಳು ಉದ್ಘಾಟನಾ ಸಮಾರಂಭ, 1:50 - ನಗರದಸಕ್ರ್ಯೂಟ್ ಹೌಸ್  ಆಗಮನ, ನಂತರ  ಸಕ್ರ್ಯೂಟ್ ಹೌಸ್‍ನಲ್ಲಿ ಮುಖ್ಯಮಂತ್ರಿಗಳೊಂದಿಗೆ  ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಬಾರ್ ಅಸೋಸಿಯೇಷನ್‍ರವರ ಭೇಟಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ,ಸಂಜೆ 4:30-  ಕಿನ್ನಿಗೋಳಿ ಸರಾಫ್ ಅಣ್ಣಯ್ಯ ಆಚಾರ್ಯ ಸಭಾಭವನದಲ್ಲಿ ಸಾರ್ವಜನಿಕರ ಸಭೆ, 6- ಬಜಪೆ ಚರ್ಚ್ ಹಾಲ್‍ನಲ್ಲಿ ಸಾರ್ವಜನಿಕರ ಸಭೆ, ರಾತ್ರಿ 10:45 ಮಂಗಳೂರಿನಿಂದ ಬೆಂಗಳೂರಿಗೆ ಸಚಿವರು ತೆರಳಲಿದ್ದಾರೆ.