ಮೂಡುಬಿದಿರೆ: ಸ್ಥಳೀಯ ಲಯನ್ಸ್ ಕ್ಲಬ್, ಲಿಯೋ ಕ್ಲಬ್, ಪವರ್ ಫ್ರೆಂಡ್ಸ್‌, ಸಮಾಜ ಮಂದಿರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಅಭಿಯಾನ ಜೂನ್ 2ರಂದು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಉದ್ಘಾಟನೆ ನಡೆಯಿತು.

ಸಮಾಜ ಮಂದಿರ ಸಭಾದ ಅಧ್ಯಕ್ಷ ಮಾಜಿ ಸಚಿವ ಅಭಯ ಚಂದ್ರ ಜೈನ್ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಶ್ರೀಪತಿ ಭಟ್, ಸಹಾಯಕ ಅಂಚೆ ಅಧೀಕ್ಷಕ ಚಂದ್ರ ನಾಯ್ಕ, ವಿವಿಧ ಕ್ಲಬ್ ಗಳ ಅಧ್ಯಕ್ಷರುಗಳಾದ ಜೊಸ್ಸಿ ಮಿನೇಜಸ್, ವಿನಯ್ ಕುಮಾರ್, ಸ್ವಯಂ ಪೂಜಾರಿ ವೇದಿಕೆಯಲ್ಲಿ ಹಾಜರಿದ್ದರು. ಅಂಚೆ ಇಲಾಖೆಯ ಗುರು ಪ್ರಸಾದ್ ಕಾರ್ಯಕ್ರಮ ಸಂಘಟಿಸಿದ್ದರು.