ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಸ್ಥಳೀಯ ಪುರಸಭೆಯ ವ್ಯಾಪ್ತಿಗೆ ಒಳಪಟ್ಟಂತೆ ಅಗತ್ಯ ಇರುವ ನೀರು ಸಂಸ್ಕರಣ ಹೆಚ್ಚುವರಿ ಘಟಕದ ಕಾಮಗಾರಿಗಾಗಿ ಭೂಮಿ ಪೂಜೆ ಸೆಪ್ಟೆಂಬರ್ 16ರಂದು ನಡೆಯಿತು. ಸ್ಥಳೀಯ ಶಾಸಕರಾದ ಉಮಾನಾಥ ಕೋಟ್ಯಾನ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. 

ಈ ಸಂದರ್ಭದಲ್ಲಿ ಮೂಡುಬಿದ್ರಿ ಪುರಸಭೆಯ ಅಧ್ಯಕ್ಷರಾದ ಜಯಶ್ರೀ, ಉಪಾಧ್ಯಕ್ಷ ನಾಗರಾಜ ಪೂಜಾರಿ, ಪುರಸಭಾ ಮುಖ್ಯಾಧಿಕಾರಿ, ಹಾಗೂ ಎಲ್ಲಾ ಅಧಿಕಾರಿ ವರ್ಗ ಮತ್ತು ಪುರಸಭಾ ಸದಸ್ಯರುಗಳು ಹಾಜರಿದ್ದರು. ಅಲ್ಲದೆ ನೂರಾರು ನಾಗರಿಕರು ಈ ಸಂದರ್ಭದಲ್ಲಿ ಸಾಕ್ಷಿಗಳಾಗಿದ್ದರು.