ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದಿರೆ: ಸ್ಥಳೀಯ ಸ್ವಸ್ತಿಶ್ರೀ ವಸತಿ ಪದವಿ ಪೂರ್ವ ಕಾಲೇಜು ಮತ್ತು ಅಧಿವಕ್ತಾ ಪರಿಷತ್ ಕರ್ನಾಟಕ –ದಕ್ಷಿಣ ಪ್ರಾಂತದ ಕಾನೂನು ಕಾರ್ಯಗಾರ ಸ್ವಸ್ತಿಶ್ರೀ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಿತು. ಹಿರಿಯ ನ್ಯಾಯವಾದಿ ಮತ್ತು ಎಂ.ಸಿ.ಎಸ್ ಬ್ಯಾಂಕ್ ಮೂಡುಬಿದಿರೆ ಅಧ್ಯಕ್ಷ ಎಂ. ಬಾಹುಬಲಿ ಪ್ರಸಾದ್ ಉದ್ಘಾಟಿಸಿದರು. 

ನಮ್ಮ ದೇಶದ ಸಂವಿಧಾನ ಪ್ರಪಂಚದಲ್ಲಿ ಅತೀ ಉತ್ತಮವಾದ ಸಂವಿಧಾನವಾಗಿರುತ್ತದೆ.. ಭಾರತದ ಪ್ರಜಾಪ್ರಭುತ್ವ ಸುಗಮವಾಗಿ ಕಾರ್ಯ ನಿರ್ವಹಿಸಲು ಸಂವಿಧಾನದ ಚೌಕಟ್ಟು ಕಾರಣ. ನಮ್ಮ ನೆರೆಯ ರಾಷ್ಟ್ರದಲ್ಲಿ ಕಾನೂನನ್ನು ಪಾಲಿಸದ ಕಾರಣ ಅರಾಜಕತೆ ಇದೆ. ಸಂವಿಧಾನ ರಚನೆ ಮತ್ತು ರಕ್ಷಣೆಯಲ್ಲಿ ವಕೀಲರ ಪಾತ್ರ ಹಿರಿದಾಗಿರುತ್ತದೆ. ಅವರು ಸಂವಿಧಾನದಲ್ಲಿ ಜನರಿಗೆ ಕೊಟ್ಟ ಹಕ್ಕು- ಕರ್ತವ್ಯ ಹಾಗೂ ತಿದ್ದುಪಡಿಗಳ ಬಗ್ಗೆ ವಿದ್ಯಾರ್ಥಿಗಳ ಗಮನ ಸೆಳೆದರು. 

ನ್ಯಾಯವಾದಿ ಜಯಪ್ರಕಾಶ್ ಭಂಡಾರಿ ಮೋಟಾರು ವಾಹನ ಕಾಯ್ದೆಯ ಬಗ್ಗೆ ವಿವರಿಸಿದರು. ಇತ್ತೀಚಿನ ದಿನಗಳಲ್ಲಿ ವಾಹನ ಚಾಲಕರು ಸರಿಯಾದ ದಾಖಲೆಗಳಿಲ್ಲದೆ ವಾಹನ ಚಲಾಯಿಸುವದರಿಂದ ಜೈಲು ಶಿಕ್ಷೆ ಮತ್ತು ದಂಡ ಕಟ್ಟ ಬೇಕಾಗುತ್ತದೆ ಎಂದರು . ಸಮಾರಂಭದ ಅಧ್ಯಕ್ಷತೆಯನ್ನು ಅಧಿವಕ್ತಾ ಪರಿಷತ್ ಮೂಡುಬಿದಿರೆ ಘಟಕದ ಅಧ್ಯಕ್ಷ ಎಂ ಕೆ ದಿವಿಜೇಂದ್ರ ಕುಮಾರ್ ವಹಿಸಿದರು. 

ಕಾಲೇಜಿನ ಪ್ರಾಂಶುಪಾಲರಾದ  ಸೌಮ್ಯಶ್ರೀ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ನಾಯಕ ರೋಹಿತ್ ಅತಿಥಿಗಳನ್ನು ಸ್ವಾಗತಿಸಿದರು. ಉಪನ್ಯಾಸಕಿ ಸುಜಾತ ವಂದಿಸಿದರು.