ವರದಿ ರಾಯಿ ರಾಜಕುಮಾರ ಮೂಡುಬಿದಿರೆ
ಮೂಡುಬಿದಿರೆಯ ಸಮುದಾಯ ಆರೋಗ್ಯ ಕೇಂದ್ರ ಸೂಕ್ತವಾದಂತಹ ತಜ್ಞ ವೈದ್ಯರುಗಳು ಇಲ್ಲದೆ ಇರುವ ವೈದ್ಯರುಗಳ ಮೂಲಕ ಕಳೆದ ಹಲವಾರು ವರ್ಷಗಳಿಂದ ನಡೆಯುತ್ತಿದೆ. ಎಲ್ಲ ರೀತಿಯ ಸೌಲಭ್ಯಗಳು ಇಲ್ಲಿ ಇದ್ದು ಕೂಡ ತಜ್ಞ ವೈದ್ಯರುಗಳು ಇಲ್ಲದ ಕಾರಣ ಹೆಚ್ಚಿನ ಚಿಕಿತ್ಸೆಗಳಿಗೆ ಮಂಗಳೂರಿನ ಜಿಲ್ಲಾ ಆಸ್ಪತ್ರೆಯನ್ನೇ ಅವಲಂಬಿಸಬೇಕಾಗಿದೆ.
ತಜ್ಞ ವೈದ್ಯರ ಕೊರತೆಯ ನಡುವೆಯೂ ಹಲ್ಲಿನ ತಜ್ಞ ವೈದ್ಯರು ಆಸ್ಪತ್ರೆಯನ್ನು ಹಲವಾರು ವರ್ಷಗಳಿಂದ ಉತ್ತಮ ರೀತಿಯಲ್ಲಿ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎನ್ನುವುದು ಸಮಾಧಾನಕರ ಸಂಗತಿಯಾಗಿರುತ್ತದೆ. ಆದುದರಿಂದ ತಕ್ಷಣವೇ ಸೂಕ್ತ ತಜ್ಞ ವೈದ್ಯರುಗಳ ನೇಮಕವನ್ನು ಮಾಡಿ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಂತ್ರಿಯೂ, ದ ಕ ಜಿಲ್ಲಾ ಉಸ್ತುವಾರಿ ಸಚಿವರ ಆದ ದಿನೇಶ್ ಗುಂಡೂರಾವ್ ಅವರಿಗೆ ಕೆ ಪಿ ಸಿ ಸಿ ವಕ್ತಾರ ಪದ್ಮಪ್ರಸಾದ್ ಜೈನ್ ಮನವಿಯನ್ನು ಅರ್ಪಿಸಿದರು.