ಪಂಜಾಬ್ ರಾಜ್ಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಮಂಗಳವಾರ ಮಧ್ಯಾಹ್ನ ದಿಢೀರನೆ ಹುದ್ದೆಗೆ ತನ್ನ ರಾಜೀನಾಮೆ ಪತ್ರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ಸಲ್ಲಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಸಿಧು ರಾಜಕೀಯ ಪಂಜಾಬ್ ಕಾಂಗ್ರೆಸ್‌ನಲ್ಲಿ ಸ್ಪಷ್ಟ ಬಣಗಳಿಗೆ ಕಾರಣವಾಗಿತ್ತು. ಅಂತಿಮವಾಗಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದರು. ಚನ್ನಿ ಹೊಸ ಮುಖ್ಯಮಂತ್ರಿ ಆಗಿ ಬಂದರು. ಆದರೆ ಪಕ್ಷದ ಭಿನ್ನಮತ ಶಮನವಾಗದ ಕಾರಣ ನವಜೋತ್ ಸಿಂಗ್ ರಾಜೀನಾಮೆ ನೀಡಲೇಬೇಕಾದ ಸ್ಥಿತಿ ಉಂಟಾಯಿತು. ಪಕ್ಷದ ಕೆಲಸದಲ್ಲಿ ತೊಡಗಿಕೊಳ್ಳುವುದಾಗಿ ಅವರು ಹೇಳಿದರು.