ಪಡುಬಿದ್ರಿ: ಶ್ರೀ ಕಟೀಲು ಮೇಳದ ಭಾಗವತ  ಅಂಡಾಲ ದೇವಿ ಪ್ರಸಾದ ಆಳ್ವ  ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿಯನ್ನು ನೀಡಲಾಗುವುದು. ಜನವರಿ 11 ಶನಿವಾರ ಪಡುಬಿದ್ರೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಲ್ಲಿ ನಡೆಯಲಿರುವ ಪಡುಬಿದ್ರೆ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ ಕಟೀಲು ಮೇಳದ 28 ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ಸನ್ಮಾನ ನಡೆಯಲಿದೆ.

ದೇವೀ ಪ್ರಸಾದ ಅವರು ಕಳೆದು ಮೂರುವರೆ ದಶಕಗಳಿಂದ ಯಕ್ಷಗಾನ ರಂಗದಲ್ಲಿ ಪ್ರಸಂಗ ರಚನೆ ಹಾಗೂ ಭಾಗವತಿಕೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದವರು. ತೆಂಕು ಹಾಗೂ ಬಡಗು ತಿಟ್ಟಿನ ಟೆಂಟ್ ಮೇಳಗಳಲ್ಲೂ ಅವರ ಪ್ರಸಂಗಗಳು ಯಶಸ್ವಿ ಪ್ರದರ್ಶನ ಕಂಡಿವೆ.

ಕಟೀಲು ಮೇಳದಲ್ಲೇ ಬಣ್ಣದ ವೇಷಧಾರಿಯಾಗಿ ರೂಪುಗೊಂಡು ಕಳೆದ 35 ವರ್ಷಗಳಿಂದ ಕಲಾ ಸೇವೆಗೈಯ್ಯುತ್ತಿರುವ  ಸುರೇಶ ಕುಪ್ಪೆಪದವು ಅವರು ಮಹಿಷಾಸುರ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದಿದ್ದಾರೆ.

ಕಂಬಳ ಕೋಣಗಳ ಮಾಲಕರಾಗಿ ಖ್ಯಾತಿ ಪಡೆದಿದ್ದ ಮುಂಬೈ ಘಾಟಿಕೋಪರ್ ನ ಭಾರತ್ ಕೆಫೆ ಸಂಸ್ಥಾಪಕ ಪೂಲ ವಿಠ್ಠಲ ಶೆಟ್ಟಿ ಅವರ ಸ್ಮರಣಾರ್ಥ ಹಿರಿಯ ಸಾಧಕರಿಗೆ  ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕದ್ರಿ ನವನೀತ ಶೆಟ್ಟಿ, ಐಕಳ ವಿಶ್ವನಾಥ ಶೆಟ್ಟಿ,ಎರ್ಮಾಳ್ ವಿಶುಕುಮಾರ್ ಅವರನ್ನೊಳಗೊಂಡ ಸಮಿತಿಯು ಪ್ರತೀ ವರ್ಷ ಪ್ರಶಸ್ತಿ ವಿಜೇತರ ಆಯ್ಕೆ ಮಾಡುತ್ತಿದೆ ಎಂದು ಸತೀಶ್ ವಿಠ್ಠಲ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕಟೀಲು ಮೇಳದವರಿಂದ " "ರಾಮ -ಕೃಷ್ಣ - ಗೋವಿಂದ " ಯಕ್ಷಗಾನ ಬಯಲಾಟ ಪ್ರದರ್ಶನವಿದೆ.