ಧರ್ಮಸ್ಥಳ : ರುಡ್ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಸಂಸ್ಥೆಗೆ ಭೇಟಿ ನೀಡಿ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಶಿಭಿರಾರ್ಥಿUಳಿಗೆ ಪ್ರಮಾಣ ಪತ್ರವನ್ನು ನೀಡಿದರು. ಛಾಯಾಗ್ರಹಣದಲ್ಲಿ ತಾಳ್ಮೆ ಬಹಳ ಮುಖ್ಯ. ಛಾಯಾಗ್ರಾಹಕರಲ್ಲಿ ಭಾವನೆಯನ್ನು ಅರಿತು ಛಾಯಾ ಚಿತ್ರವನ್ನು ತೆಗೆಯುವುದು ಛಾಯಾಗ್ರಾಹಕನ ಕಲೆ ಎಂದುಕಿವಿ ಮಾತು ನೀಡಿದರು. ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾದ ಗಿರಿಧರ್ ಕಲ್ಲಾಪುರ ಸ್ವಾಗತಿಸಿದರೆ, ನಿರ್ದೇಶಕರಾದ ಎಂ. ಸುರೇಶ್ರವರು ತರಬೇತಿಯ ಹಿನ್ನೋಟ ನೀಡಿದರು. ವೇದಿಕೆಯಲ್ಲಿ ಅತಿಥಿ ಉಪನ್ಯಾಸಕರಾದ ಸೂರ್ಯ ಪ್ರಕಾಶ್ರವರು ಉಪಸ್ಥಿತರಿದ್ದರು. ಹಿರಿಯ ಉಪನ್ಯಾಸಕರಾದ ಅಬ್ರಹಾಂಜೇಮ್ಸ್ ಕಾರ್ಯಕ್ರಮ ನಿರ್ವಹಿಸಿದರೆ, ಹಿರಿಯ ಉಪನ್ಯಾಸಕರಾದ ಅನಸೂಯರವರು ಧನ್ಯವಾದವಿತ್ತರು. ಈ ತರಬೇತಿ ಕಾರ್ಯಕ್ರಮದಲ್ಲಿ 23 ಶಿಭಿರಾರ್ಥಿಗಳು ಭಾಗವಹಿಸಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ತರಬೇತಿಯಲ್ಲಿ ತೆಗೆದ ಛಾಯಾಚಿತ್ರಗಳ ಪ್ರದರ್ಶನವನ್ನು ವೀಕ್ಷಿಸಿದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಶ್ಲಾಘನೆಯನ್ನು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮೆನ್ಸ್ ಪಾರ್ಲರ್ ತರಬೇತಿಯ ಶಿಭಿರಾರ್ಥಿಗಳು ಕೂಡ ಭಾಗವಹಿಸಿದ್ದರು.