ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಗೆ ಜಂಟಿ ಸಂಯೋಜಕರನ್ನಾಗಿ ಆರ್. ಕೆ. ಪೃಥ್ವಿರಾಜ್ ಅವರನ್ನು ನೇಮಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಲ ಆದೇಶ ಹೊರಡಿಸಿದ್ದಾರೆ.

ಧಾರ್ಮಿಕ, ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಆರ್.ಕೆ.ಪೃಥ್ವಿರಾಜ್ ಅವರು ಈ ಹಿಂದೆ ಎರಡು ಬಾರಿ ಮಂಗಳೂರು ತಾಲೂಕು ಸದಸ್ಯರಾಗಿ, ಎರಡು ಬಾರಿ ಗುರುಪುರ ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಎರಡನೇ ಅವಧಿಗೆ ಕೆಪಿಸಿಸಿ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.