ಉಜಿರೆ: ರಾಜ್ಯಸಭಾ ಸದಸ್ಯರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಮಂಗಳವಾರ ಧರ್ಮಸ್ಥಳದಲ್ಲಿ ಅಳಿಕೆಯ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಗಳ ವತಿಯಿಂದ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ ಭಟ್ ಮತ್ತು ವಿದ್ಯಾ ಕೇಂದ್ರದ ಪ್ರಾಂಶುಪಾಲ ಶಿವಕುಮಾರ್ ನೇತೃತ್ವದಲ್ಲಿ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸದಲ್ಲಿ) ಬ್ಯಾಂಡ್ ಗೌರವ ರಕ್ಷೆಯೊಂದಿಗೆ ಭಕ್ತಿಪೂರ್ವಕ ಅಭಿನಂದನೆಗಳೊಂದಿಗೆ ಗೌರವಿಸಿದರು. 

ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಘು ಟಿ.ವೈ, ಉದನೇಶ್ವರ ಭಟ್, ಆನಂದ ಶೆಟ್ಟಿ, ಚಂದ್ರಶೇಖರ, ಪಿ. ಹಾಗೂ ಅಧ್ಯಾಪಕರು ಮತ್ತು ಬ್ಯಾಂಡ್ ಸೆಟ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.