ಬುಧವಾರ 11 ಗಂಟೆಗೆ ಬೆಂಗಳೂರಿನ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಹೊಸ ಮುಖ್ಯಮಂತ್ರಿಯಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್‌ರಿಂದ ಪ್ರಮಾಣವಚನ ಸ್ವೀಕರಿಸಿದರು.

ಮಾಜೀ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಮುರುಗೇಶ್ ನಿರಾಣಿ, ಬೊಮ್ಮಾಯಿ ಕುಟುಂಬದವರು ಹಾಜರಿದ್ದರು.

ದೆಹಲಿಯಲ್ಲಿ ಪಕ್ಷದ ಪ್ರಮುಖರನ್ನು ಭೇಟಿಯಾದ ಬಳಿಕ ಆದಷ್ಟು ಬೇಗ ಸಚಿವ ಸಂಪುಟದ ರಚನೆ ಮಾಡುತ್ತೇನೆ ಎಂದು ಅವರು ಹೇಳಿದರು.